ಬೆಂಗಳೂರು(ವಿಶ್ವ ಕನ್ನಡಿಗ ನ್ಯೂಸ್) : ಬೆಂಗಳೂರು ಗ್ರಾಮಾಂತರ ಜಿಲ್ಲೆಯ ವಿಜಯಪುರ ನಗರದಲ್ಲಿ ವಕ್ಫ್ ಆಸ್ತಿಗಳನ್ನು ಸಂರಕ್ಷಣೆ ಮಾಡುವ ಜೊತೆಗೆ ಅಭಿವೃದ್ಧಿಗೊಳಿಸಲು ಎಲ್ಲಾ ರೀತಿಯ ನೆರವು ನೀಡುವುದಾಗಿ ಮಾಜಿ ಸಂಸದ ಸಿ.ನಾರಾಯಣಸ್ವಾಮಿ ಭರವಸೆ ನೀಡಿದ್ದಾರೆ.
ವಿಜಯಪುರ ಜಾಮೀಯಾ ಮಸೀದಿಯ ನೂತನ ಪದಾಧಿಕಾರಿಗಳ ನಿಯೋಗದೊಂದಿಗೆ ಸಮಾಲೋಚನೆ ನಡೆಸಿದ ಅವರು ಮುಸ್ಲಿಂ ಸಮುದಾಯದ ಅಭಿವೃದ್ಧಿಗಾಗಿ ಸರಕಾರ ಜಾರಿಗೊಳಿಸುವ ಯೋಜನೆಗಳ ಕುರಿತು ಸಮುದಾಯದ ಜನರಲ್ಲಿ ಅರಿವು ಮತ್ತು ಜಾಗೃತಿ ಮೂಡಿಸಬೇಕೆಂದರು.
ವಿಜಯಪುರದ ನಗರದ ಅಭಿವೃದ್ಧಿಗಾಗಿ ವಕ್ಫ್ ಮಂಡಳಿಯಿಂದ ನೆರವು ಒದಗಿಸಲು ವಕ್ಫ್ ಹಾಗೂ ಅಲ್ಪಸಂಖ್ಯಾತರ ಖಾತೆ ಸಚಿವ ಝಮೀರ್ ಅಹಮದ್ ಖಾನ್ ಅವರೊಂದಿಗೆ ಸಮಾಲೋಚನೆ ಮಾಡುವ ಜೊತೆಗೆ ಸಮಿತಿಯ ಪದಾಧಿಕಾರಿಗಳು ಭೇಟಿ ಮಾಡಲು ಅವಕಾಶ ಕಲ್ಪಿಸುತ್ತೇನೆ ಎಂದರು.
ಇದೇ ವೇಳೆಯಲ್ಲಿ ವಾಣಿಜ್ಯ ಸಂಕೀರ್ಣ, ಕಲ್ಯಾಣ ಮಂಟಪ ಸಹಿತ ಇನ್ನಿತರೆ ಅಭಿವೃದ್ಧಿ ಯೋಜನೆಗಳ ಕುರಿತು ಕ್ರಿಯಾ ಯೋಜನೆ ಹಾಗೂ ಅಂದಾಜು ಪಟ್ಟಿಯನ್ನು ಸಿದ್ದಪಡಿಸಿಕೊಳ್ಳಲು ಮಾಜಿ ಸಂಸದರು ಸಲಹೆ ನೀಡಿದ್ದಾರೆ.
ಜಾಮೀಯಾ ಮಸೀದಿಯ ಅಧ್ಯಕ್ಷ ಎ.ಆರ್.ಹನೀಫ್,ಉಪಾಧ್ಯಕ್ಷ ಎ.ಬಾಬು, ಕಾರ್ಯದರ್ಶಿ ಸೈಯದ್ ವಝೀರ್, ಖಜಾಂಚಿ ಸೈಯದ್ ಆತೀಫ್, ಜಂಟಿ ಕಾರ್ಯದರ್ಶಿ ಕೆ.ಬಾಬು ಸದಸ್ಯರುಗಳಾದ ಅಕ್ರಮ್ ಪಾಷ, ಉಬೇದುಲ್ಲಾ, ಅಕ್ಬರ್ ಮತ್ತಿತರರು ಉಪಸ್ಥಿತರಿದ್ದರು.
– ಎಂ.ಎ.ತಮೀಮ್ ಪಾಷ ಶಿಡ್ಲಘಟ್ಟ
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
ದಯವಿಟ್ಟು ವೈಯುಕ್ತಿಕ ಹಾಗೂ ಧಾರ್ಮಿಕ ನಿಂದನಾತ್ಮಕ ಮತ್ತು ಹಿಯಾಳಿಕೆಯ ಪ್ರತಿಕ್ರಿಯೆಗಳನ್ನು ಬರೆಯಬೇಡಿ. ನೀವು ಬರೆಯುವ ಪ್ರತಿಕ್ರಿಯೆಗಳಿಗೆ ನೀವೇ ಜವಾಬ್ಧಾರರಾಗಿದ್ದು ವಿಶ್ವ ಕನ್ನಡಿಗ ನ್ಯೂಸ್ ಜವಾಬ್ಧಾರರಾಗಿರುವುದಿಲ್ಲ.
ಮಾಹಿತಿ ತಂತ್ರಜ್ಞಾನ ಕಾಯ್ದೆ ಪ್ರಕಾರ ಅಸಭ್ಯ, ನಿಂದನಾತ್ಮಕ ಮತ್ತು ಪ್ರಚೋದನಾಕಾರಿ ಪ್ರತಿಕ್ರಿಯೆಗಳನ್ನು ಬರೆಯುವುದು ಶಿಕ್ಷಾರ್ಹ ಅಪರಾಧವಾಗಿದ್ದು, ನೀವು ಬರೆಯುವ ಪ್ರತಿಕ್ರಿಯೆಗಳಿಗೆ ನೀವೇ ಸಂಪೂರ್ಣ ಜವಾಬ್ಧಾರರಾಗಿರುತ್ತೀರಿ. ಇಂತಹ ಪ್ರತಿಕ್ರಿಯೆಗಳ ಬಗ್ಗೆ ಸರ್ಕಾರ ಅಥವಾ ಸಂಬಂಧಪಟ್ಟ ಇಲಾಖೆ ಮಾಹಿತಿ ಕೇಳಿದರೆ ಪ್ರತಿಕ್ರಿಯೆ ಬರೆದವರ ಇ-ಮೇಲ್ ಅಡ್ರೆಸ್ ಮತ್ತು ಅವರ ಐಪಿ ಅಡ್ರೆಸ್ ಕೊಡಲು ವಿಶ್ವ ಕನ್ನಡಿಗ ನ್ಯೂಸ್ ಬದ್ಧವಾಗಿರುತ್ತದೆ.
ಯಾವುದೇ ಕಾಮೆಂಟ್ ಅನ್ನು ಪ್ರಕಟಿಸುವ ಇಲ್ಲವೇ ಪ್ರಕಟಿಸದಿರುವ ಅಥವಾ ಅದರಲ್ಲಿರುವ ಕೆಲ ಆಕ್ಷೇಪಾರ್ಹ ಪದಗಳನ್ನು ತೆಗೆದು ಹಾಕುವ ಸಂಪೂರ್ಣ ಅಧಿಕಾರ ಸಂಪಾದಕೀಯ ಮಂಡಳಿಗಿದೆ.
ಇಲ್ಲಿ ಪ್ರಕಟವಾದ ಸುದ್ದಿ ಮತ್ತು ಕಾಮೆಂಟುಗಳ ಬಗ್ಗೆ ಆಕ್ಷೇಪಣೆಗಳಿದ್ದಲ್ಲಿ ಸಂಪಾದಕರನ್ನು ಸಂಪರ್ಕಿಸಿರಿ
ಅಬ್ದುಲ್ ಹಮೀದ್ .ಸಿ .ಹೆಚ್. ಪ್ರಧಾನ ಸಂಪಾದಕರು [email protected]
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.