ಪೇರಾಲು(ವಿಶ್ವಕನ್ನಡಿಗ ನ್ಯೂಸ್): ಸಂಘಗಳ ಚಟುವಟಿಕೆಗಳು ಔಪಚಾರಿಕ ಶಿಕ್ಷಣದ ಅವಿಭಾಜ್ಯ ಅಂಗ. ಪಠ್ಯ ವಿಷಯಗಳನ್ನು ಸರಿಯಾಗಿ ಅರಿತುಕೊಳ್ಳಲು ಮತ್ತು ಮಾಡಿನೋಡಲು ವಿಜ್ಞಾನ, ಸಮಾಜವಿಜ್ಞಾನವೇ ಮೊದಲಾದ ಸಂಘಗಳ ಚಟುವಟಿಕೆಗಳು ವೇದಿಕೆಯನ್ನೊದಗಿಸುತ್ತವೆ ಎಂದು ಪುತ್ತಿಗೆ ಮುಹಿಮ್ಮತ್ ಹಿರಿಯ ಮಾಧ್ಯಮಿಕ ಶಾಲಾ ಶಿಕ್ಷಕ ಮೊಹಮ್ಮದ್ ರಾಶೀದ್ ನುಡಿದರು.
ಪೇರಾಲು ಸರಕಾರಿ ಕಿರಿಯ ಬುನಾದಿ ಶಾಲೆಯ ವಿವಿಧ ಸಂಘಗಳ ವಾರ್ಷಿಕ ಚಟುವಟಿಕಗಳನ್ನು ಉದ್ಘಾಟಿಸಿ ಅವರು ಮಾತನಾಡಿದರು. ಕಸದಿಂದ ರಸ ಎಂಬ ತತ್ವದ ಆಧಾರದಲ್ಲಿ ತ್ಯಾಜ್ಯ ವಸ್ತುಗಳಿಂದ ತಯಾರಿಸಬಹುದಾದ ಉಪಯುಕ್ತ ವಸ್ತುಗಳ ವಿವಿಧ ಮಾದರಿಯನ್ನು ಸ್ವತಃ ಮಾಡಿ ಪರಿಚಯಿಸುವುದರ ಮೂಲಕ ಅವರು ಉದ್ಘಾಟನೆಯನ್ನು ನೆರವೇರಿಸಿದರು.
ಶಾಲಾ ಪಿಟಿಎ ಅಧ್ಯಕ್ಷ ಮೊಹಮ್ಮದ್ ಬಿಎ ಪೇರಾಲು ಅಧ್ಯಕ್ಷತೆ ವಹಿಸಿದರು. ಮುಖ್ಯ ಶಿಕ್ಷಕ ಗುರುಮೂರ್ತಿ, ಶುಭಹಾರೈಸಿದರು. ವಿವಿಧ ಸಂಘಗಳ ಮೇಲ್ನೋಟ ವಹಿಸುವ ಜವಾಬ್ದಾರಿ ವಹಿಸಿಕೊಂಡಿರುವ ಶಿಕ್ಷಕರಾದ ವಿನುಕುಮಾರ್, ಮೊಹಮ್ಮದ್ ನೌಫೆಲ್, ದೀಪಾ ರಾಜಗೋಪಾಲ್, ಫರ್ಝಾನ, ರಸಿಯಾ, ರುಕ್ಮಿಣಿ ಜಿ, ಪ್ರಸೀನ ಬಿಕೆ, ಸಜಿನಾ ಪಿಪಿ ಆಯಾ ಸಂಘಗಳು ಈ ವರ್ಷ ಹಮ್ಮಿಕೊಂಡಿರುವ ಚಟುವಟಿಕೆಗಳ ಬಗ್ಗೆ ಮಾಹಿತಿ ನೀಡಿದರು. ಹಿರಿಯ ಶಿಕ್ಷಕಿ ಚಿತ್ರಕಲಾ ಎಂ ಸ್ವಾಗತಿಸಿ ರುಕ್ಸಾನ ಟೀಚರ್ ವಂದಿಸಿದರು.
Your email address will not be published. Required fields are marked *
ದಯವಿಟ್ಟು ವೈಯುಕ್ತಿಕ ಹಾಗೂ ಧಾರ್ಮಿಕ ನಿಂದನಾತ್ಮಕ ಮತ್ತು ಹಿಯಾಳಿಕೆಯ ಪ್ರತಿಕ್ರಿಯೆಗಳನ್ನು ಬರೆಯಬೇಡಿ. ನೀವು ಬರೆಯುವ ಪ್ರತಿಕ್ರಿಯೆಗಳಿಗೆ ನೀವೇ ಜವಾಬ್ಧಾರರಾಗಿದ್ದು ವಿಶ್ವ ಕನ್ನಡಿಗ ನ್ಯೂಸ್ ಜವಾಬ್ಧಾರರಾಗಿರುವುದಿಲ್ಲ.
ಮಾಹಿತಿ ತಂತ್ರಜ್ಞಾನ ಕಾಯ್ದೆ ಪ್ರಕಾರ ಅಸಭ್ಯ, ನಿಂದನಾತ್ಮಕ ಮತ್ತು ಪ್ರಚೋದನಾಕಾರಿ ಪ್ರತಿಕ್ರಿಯೆಗಳನ್ನು ಬರೆಯುವುದು ಶಿಕ್ಷಾರ್ಹ ಅಪರಾಧವಾಗಿದ್ದು, ನೀವು ಬರೆಯುವ ಪ್ರತಿಕ್ರಿಯೆಗಳಿಗೆ ನೀವೇ ಸಂಪೂರ್ಣ ಜವಾಬ್ಧಾರರಾಗಿರುತ್ತೀರಿ. ಇಂತಹ ಪ್ರತಿಕ್ರಿಯೆಗಳ ಬಗ್ಗೆ ಸರ್ಕಾರ ಅಥವಾ ಸಂಬಂಧಪಟ್ಟ ಇಲಾಖೆ ಮಾಹಿತಿ ಕೇಳಿದರೆ ಪ್ರತಿಕ್ರಿಯೆ ಬರೆದವರ ಇ-ಮೇಲ್ ಅಡ್ರೆಸ್ ಮತ್ತು ಅವರ ಐಪಿ ಅಡ್ರೆಸ್ ಕೊಡಲು ವಿಶ್ವ ಕನ್ನಡಿಗ ನ್ಯೂಸ್ ಬದ್ಧವಾಗಿರುತ್ತದೆ.
ಯಾವುದೇ ಕಾಮೆಂಟ್ ಅನ್ನು ಪ್ರಕಟಿಸುವ ಇಲ್ಲವೇ ಪ್ರಕಟಿಸದಿರುವ ಅಥವಾ ಅದರಲ್ಲಿರುವ ಕೆಲ ಆಕ್ಷೇಪಾರ್ಹ ಪದಗಳನ್ನು ತೆಗೆದು ಹಾಕುವ ಸಂಪೂರ್ಣ ಅಧಿಕಾರ ಸಂಪಾದಕೀಯ ಮಂಡಳಿಗಿದೆ.
ಇಲ್ಲಿ ಪ್ರಕಟವಾದ ಸುದ್ದಿ ಮತ್ತು ಕಾಮೆಂಟುಗಳ ಬಗ್ಗೆ ಆಕ್ಷೇಪಣೆಗಳಿದ್ದಲ್ಲಿ ಸಂಪಾದಕರನ್ನು ಸಂಪರ್ಕಿಸಿರಿ
ಅಬ್ದುಲ್ ಹಮೀದ್ .ಸಿ .ಹೆಚ್. ಪ್ರಧಾನ ಸಂಪಾದಕರು [email protected]
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.