ಬೆಂಗಳೂರು(www.vknews.in):ಸರ್ಕಾರದಿಂದ ಪ್ರತಿ ವರ್ಷ ವಿದ್ಯಾರ್ಥಿಗಳಿಗೆ ನೀಡುವ ಪೋಸ್ಟ್ ಮೆಟ್ರಿಕ್ ,ಫ್ರೀ ಮೆಟ್ರಿಕ್ ,ಅರಿವು ,ವಿಧ್ಯಾಸಿರಿಯಂತಹ ವಿದ್ಯಾರ್ಥಿ ವೇತನವನ್ನು ರಾಜ್ಯದ ಹಲವು ವಿದ್ಯಾರ್ಥಿಗಳಿಗೆ ಮಂಜೂರಾಗದೆ ಇರುವುದರಿಂದ,ಇದನ್ನು ಅದಷ್ಟು ಬೇಗ ವಿದ್ಯಾರ್ಥಿ ವಿದ್ಯಾರ್ಥಿಗಳ ವರ್ಗಾಯಿಸುವಂತೆ ಕೊರಿ ಸರ್ವ ಕಾಲೇಜು ವಿದ್ಯಾರ್ಥಿ ಸಂಘ ದಕ್ಷಿಣಕನ್ನಡ ಇದರ ವತಿಯಿಂದ ಜಿಲ್ಲಾಧಿಕಾರಿ ಹಾಗೂ ಮುಖ್ಯಮಂತ್ರಿಗಳಿಗೆ ಇ-ಮೈಲ್ ಮುಖಾಂತರ ಮನವಿ ಸಲ್ಲಿಸಲಾಯಿತು. ಈ ಪ್ರಕ್ರಿಯೆಗೆ ಸರ್ವ ಕಾಲೇಜು ವಿದ್ಯಾರ್ಥಿ ಸಂಘದ ರಾಜ್ಯ ಕಾರ್ಯದರ್ಶಿ ಭಾತಿಷ್ ಅಲಿಕೆಮಜಲು, ಜಿಲ್ಲಾದ್ಯಕ್ಷ ಗುರುದ್ದತ್ ಮಲ್ಲಿ,ಜಿಲ್ಲಾ ಉಪಾಧ್ಯಕ್ಷ ಸಿದ್ದೀಕ್ ಕಾಟಿಪಳ್ಳ ಸಹಕರಿಸಿದ್ದಾರೆ ಎಂದು ಸರ್ವ ಕಾಲೇಜು ವಿದ್ಯಾರ್ಥಿ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅಬ್ದುಲ್ ರಝಾಕ್ ಮರ್ಧಾಳ ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.