ಶಿಡ್ಲಘಟ್ಟ,(ವಿಶ್ವಕನ್ನಡಿಗ ನ್ಯೂಸ್): ನಿತ್ಯೋತ್ಸವ ಕವಿ ಜೋಗದ ಸಿರಿ ಬೆಳಕಿನ ಖ್ಯಾತಿಯ ಪ್ರೋಫೆಸರ್ ಕೆ.ಎಸ್.ನಿಸಾರ್ ಅಹಮದ್ ಅವರ ನಿಧನಕ್ಕೆ ಹಿರಿಯ ಕಾಂಗ್ರೇಸ್ ಶಾಸಕ ಹಾಗೂ ಮಾಜಿ ಸಚಿವ ವಿ.ಮುನಿಯಪ್ಪ ಹಾಗೂ ಶಿಡ್ಲಘಟ್ಟ ಬ್ಲಾಕ್ ಕಾಂಗ್ರೇಸ್ ಸಮಿತಿಯ ಅಧ್ಯಕ್ಷ ಡಾ.ಶಶಿಧರ್ ಮುನಿಯಪ್ಪ ತೀವ್ರ ಸಂತಾಪ ಸೂಚಿಸಿದ್ದಾರೆ.
ಈ ಕುರಿತು ಜಂಟಿ ಹೇಳಿಕೆ ನೀಡಿರುವ ಅವರು ಕನ್ನಡ ಸಾಹಿತ್ಯ ಪ್ರಕಾರಗಳಿಂದ ಇಡೀ ಪ್ರಪಂಚದಲ್ಲಿ ತಮ್ಮದೇ ಛಾಪು ಮೂಡಿಸಿದರು ತಮ್ಮ ಸಾಹಿತ್ಯ ಸಂಪತ್ತಿನಿಂದ ಮನೆ ಮನೆಗೆ ತಲುಪಿದ್ದರು ನಿತ್ಯೋತ್ಸವ ಕೃತಿ ಅವರಿಗೆ ಸಾಕಷ್ಟು ಜನಮನ್ನಣೆ ತಂದುಕೊಟ್ಟಿತು ಜನ ಅವರನ್ನು ಪ್ರೀತಿಯಿಂದ ನಿತ್ಯೋತ್ಸವದ ಕವಿಯೆಂದು ಗುರುತಿಸಿದ್ದರು ಅವರ ಅಗಲಿಕೆಯಿಂದ ಕನ್ನಡ ಸಾಹಿತ್ಯ ಕ್ಷೇತ್ರಕ್ಕೆ ಅಪಾರ ನಷ್ಟಉಂಟಾಗಿದೆ ಅವರ ಕುಟುಂಬ ಸದಸ್ಯರಿಗೆ ದುಃಖವನ್ನು ಸಹಿಸುವ ಶಕ್ತಿ ದೇವರು ಕರುಣಿಸಲಿ ಎಂದು ಶಾಸಕರು ಪ್ರಾರ್ಥಿಸಿದ್ದಾರೆ.
ವರದಿ: ಎಂ.ಎ.ತಮೀಮ್ ಪಾಷ ಶಿಡ್ಲಘಟ್ಟ
ವರದಿಗಾರರು, ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.