ಮಂಗಳೂರು(ವಿಶ್ವಕನ್ನಡಿಗ ನ್ಯೂಸ್): ಮೇ. 04 ನಾಳೆಯಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬೆಳಿಗ್ಗೆ ಗಂಟೆ 7ರಿಂದ ರಾತ್ರಿ 7ರವರೆಗೆ ಲಾಕ್ ಡೌನ್ ಸಡಿಲಿಕೆ ಮಾಡಲಾಗುವುದು ಎಂದು ದ.ಕ ಜಿಲ್ಲಾಧಿಕಾರಿ ಸಿಂಧೂ.ಬಿ.ರೂಪೇಶ್ ಅಧಿಕೃತ ಆದೇಶ ಹೊರಡಿಸಿದ್ದಾರೆ.
ನಾಳೆ ದ.ಕ ಜಿಲ್ಲೆಯಾದ್ಯಂತ ಆಟೋ ರಿಕ್ಷಾ, ಕ್ಯಾಬ್ ಸಂಚಾರಕ್ಕೆ ಅನುಮತಿ ನೀಡಲಾಗಿದೆ. ಆಟೋ ಮತ್ತು ಕ್ಯಾಬ್ ಗಳಲ್ಲಿ ಚಾಲಕ ಮತ್ತು ಇಬ್ಬರು ಪ್ರಯಾಣಿಕರಿಗೆ ಅವಕಾಶವಿದೆ. ಖಾಸಗಿ ವಾಹನಗಳಾದ ಬೈಕ್ ಮತ್ತು ಕಾರುಗಳ ಸಂಚಾರಕ್ಕೆ ಅನುಮತಿ ನೀಡಲಾಗಿದೆ. ಕಾರುಗಳಲ್ಲಿ ಚಾಲಕ ಸೇರಿ ಇಬ್ಬರು ಪ್ರಯಾಣಿಕರು ಮತ್ತು ಬೈಕ್ ಗಳಲ್ಲಿ ಒಬ್ಬರಷ್ಟೇ ಪ್ರಯಾಣಿಸಲು ಅವಕಾಶ ನೀಡಿದೆ. ಸ್ಥಳೀಯ ಅಂಗಡಿಗಳು, ವಸತಿ ಸಂಕೀರ್ಣಗಳ ಶಾಪ್, ಸಣ್ಣಪುಟ್ಟ ಶಾಪ್ ಗಳನ್ನು ತೆರೆಯಲು ಅನುಮತಿ ಜಿಲ್ಲಾಡಳಿತ ಅನುಮತಿ ಕೊಟ್ಟಿದೆ. ಖಾಸಗಿ ಸಂಸ್ಥೆ ಮತ್ತು ಕಚೇರಿಗಳಲ್ಲಿ 33% ಸಿಬ್ಬಂದಿ ಬಳಸಿ ಕೆಲಸಕ್ಕೆ ಅನುಮತಿ. ಅಗತ್ಯ ಸೇವೆಗಳಿಗೆ ಇ-ಕಾಮರ್ಸ್ ಸಂಸ್ಥೆಗಳಿಗೆ ಅವಕಾಶ ನೀಡಿದೆ. ಅಗತ್ಯ ಕಟ್ಟಡ ಕಾಮಗಾರಿ ನಡೆಸಲು ಅವಕಾಶ, ಸ್ಥಳದಲ್ಲಿದ್ದ ಕಾರ್ಮಿಕರ ಬಳಕೆಗೆ ಸೂಚನೆ, ಹೊರಗಿನಿಂದ ಕಾರ್ಮಿಕರು ಬರುವಂತಿಲ್ಲ. ಮಾರುಕಟ್ಟೆ ಮತ್ತು ಮಾರುಕಟ್ಟೆ ಸಂಕೀರ್ಣಗಳಲ್ಲಿ ಅಗತ್ಯ ವಸ್ತುಗಳ ಶಾಪ್ ತೆರೆಯಲಷ್ಟೇ ಅನುಮತಿ ನೀಡಲಾಗಿದೆ. ರಾತ್ರಿ 7 ರಿಂದ ಬೆಳಿಗ್ಗೆ 7 ರವರೆಗೆ ಸಂಚಾರ ಎಲ್ಲವೂ ಬಂದ್ ಇರಲಿದೆ.
ಹೊಟೇಲ್ ಬಾರ್, ರೆಸ್ಟೋರೆಂಟ್, ಮಾಲ್, ಸಿನಿಮಾ ಮಂದಿರ, ಜಿಮ್, ಕ್ರೀಡಾ ಸಂಕೀರ್ಣ, ಕ್ಲಬ್, ಸ್ವಿಮ್ಮಿಂಗ್ ಫೂಲ್, ಪಾರ್ಕ್, ಸೆಲೂನ್, ಸ್ಪಾ, ಬ್ಯೂಟಿ ಪಾರ್ಲರ್, ಟೆಕ್ಸ್ ಟೈಲ್ಸ್ ಮತ್ತು ಬಟ್ಟೆ ಅಂಗಡಿಗಳು ತೆರೆಯುವಂತಿಲ್ಲ ಎಂದು ತಿಳಿಸಿದ್ದಾರೆ.
ಜೊತೆಗೆ ಸಾಮಾಜಿಕ, ಧಾರ್ಮಿಕ, ಸಾಂಸ್ಕೃತಿಕ ಸೇರಿ ಜನ ಸೇರುವ ಎಲ್ಲಾ ಕಾರ್ಯಕ್ರಮಗಳಿಗೆ ನಿಷೇಧ ಹೇರಲಾಗಿದೆ.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.