ಶಿಡ್ಲಘಟ್ಟ,(ವಿಶ್ವಕನ್ನಡಿಗ ನ್ಯೂಸ್) : ಸಮಾಜದಲ್ಲಿ ಸಂಕಷ್ಟದಲ್ಲಿರುವ ಪ್ರತಿಯೊಬ್ಬರಿಗೆ ಕೈಲಾದಷ್ಟು ಸೇವೆ ಮಾಡುವ ಮೂಲಕ ಜೀವನವನ್ನು ಪಾವನ ಮಾಡಿಕೊಳ್ಳಬೇಕೆಂದು ನ್ಯಾಯಪರ ವೇದಿಕೆ ಬೆಂಗಳೂರು ಗ್ರಾಮಾಂತರ ಜಿಲ್ಲಾ ಘಟಕದ ಅಧ್ಯಕ್ಷ ಭರತ್ಗೌಡ ತಿಳಿಸಿದರು.
ನಗರದಲ್ಲಿ ಕೊರೊನಾ ಸೋಂಕು ನಿಯಂತ್ರಣ ಮಾಡಲು ಕೂಲಿ ಕಾರ್ಮಿಕರಿಗೆ ಮತ್ತು ನಿರ್ಗತಿಕರಿಗೆ ಆಹಾರ ಸಾಮಾಗ್ರಿಗಳು ಮತ್ತು ಸ್ಯಾನಿಟೈಸರ್-ಮಾಸ್ಕ್ಗಳನ್ನು ವಿತರಿಸಿ ಮಾತನಾಡಿದ ಅವರು ಸಂಘಟನೆಯ ರೂವಾರಿಗಳಾದ ಜಿ.ಎ.ಬಾವಾ ಹಾಗೂ ಶಂಕರ್ ಬದ್ರಿ ಅವರ ಮಾರ್ಗದರ್ಶನದಲ್ಲಿ ಈಗಾಗಲೇ ನಗರ ಪ್ರದೇಶದ ಕೊಳಗೇರಿ ಪ್ರದೇಶಗಳಲ್ಲಿ ಸಂಘಟನೆಯಿಂದ ಸೇವಾ ಕಾರ್ಯವನ್ನು ನಡೆಸುತ್ತಿದ್ದೀವೆ ಕೆಲವರ ಕೋರಿಕೆಯ ಮೇರೆಗೆ ಶಿಡ್ಲಘಟ್ಟ ತಾಲೂಕಿನಲ್ಲಿ ಸೇವಾ ಕಾರ್ಯವನ್ನು ನಡೆಸುತ್ತಿದ್ದೇವೆ ಅದಕ್ಕಾಗಿ ತಾಲೂಕು ಆಡಳಿತ ಸಂಪೂರ್ಣವಾಗಿ ಸಹಕರಿಸಿದೆ ಎಂದರು.
ಲಾಕ್ಡೌನ್ ಆರಂಭವಾದ ಬಳಿಕ ಸಂಘಟನೆಯ ಮೂಲಕ 5 ತಂಡಗಳನ್ನು ರಚಿಸಿ ವಲಸೆ ಬಂದಿದ್ದ ಕಾರ್ಮಿಕರಿಗೆ ನಿತ್ಯ ಆಹಾರ ಸರಬರಾಜು ಮಾಡಿ ಕೊರೊನಾ ಸೋಂಕು ನಿಯಂತ್ರಣ ಮಾಡಲು ನಾಗರಿಕರಿಗೆ,ರೇಷ್ಮೆ ಬೆಳೆಗಾರರಿಗೆ,ನೂಲು ಬಿಚ್ಚಾಣಿಕೆದಾರರಿಗೆ ಮಾಸ್ಕ್ ಮತ್ತು ಸ್ಯಾನಿಟೈಸರ್ ವಿತರಿಸಲಾಗಿದೆ ಎಂದ ಅವರು ಜನರು ಮನೆಯಲ್ಲಿದ್ದು ತಮ್ಮ ಆರೋಗ್ಯ ಕಾಪಾಡಿಕೊಂಡು ಆರೋಗ್ಯವಂತ ಸಮಾಜವನ್ನು ನಿರ್ಮಿಸಬೇಕೆಂದು ಮನವಿ ಮಾಡಿದರು.
ಇದೇ ವೇಳೆಯಲ್ಲಿ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಸದಸ್ಯರಿಗೆ ಸ್ಯಾನಿಟೈಸರ್ ಮತ್ತು ಮಾಸ್ಕ್ಗಳನ್ನು ವಿತರಿಸಿದರು,ಈ ಸಂದರ್ಭದಲ್ಲಿ ವಿನಯಗೌಡ,ಶಿಡ್ಲಘಟ್ಟದ ದೀಪಕ್,ಸೂರಿ,ಸಾಮ್ರಾಟ್,ಧನುಷ್,ನಾಗಾರ್ಜುನ್,ವಿನಯ ಮತ್ತಿತರರು ಉಪಸ್ಥಿತರಿದ್ದರು.
ವರದಿ: ಎಂ.ಎ.ತಮೀಮ್ ಪಾಷ
ವರದಿಗಾರರು, ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.