ನವದೆಹಲಿ (ವಿಶ್ವ ಕನ್ನಡಿಗ ನ್ಯೂಸ್) : ಮಾರಕ ಕೊರೋನಾ ವೈರಸ್ ಲಾಕ್ ಡೌನ್ ನಿಂದಾಗಿ ವಿದೇಶಗಳಲ್ಲಿ ಸಿಲುಕಿರುವ ಭಾರತೀಯರನ್ನು ಮೇ 7ರಿಂದ ಹಂತ ಹಂತವಾಗಿ ದೇಶಕ್ಕೆ ವಾಪಸ್ ಕರೆತರುವ ಬಗ್ಗೆ ಕೇಂದ್ರ ಸರಕಾರ ಕಾರ್ಯರೂಪಗಳನ್ನು ಮಾಡುತ್ತಿದೆ.
ಕೊರೋನಾ ವೈರಸ್ ಲಾಕ್ ಡೌನ್ ನಿಂದಾಗಿ ವಿದೇಶಗಳಲ್ಲಿರುವ ಭಾರತೀಯರು ತಾವಿರುವ ಸ್ಥಳಗಳಲ್ಲೇ ಬಾಕಿಯಾಗಿದ್ದಾರೆ, ಪ್ರಮುಖವಾಗಿ ಗಲ್ಫ್ ರಾಷ್ಟ್ರಗಳಲ್ಲಿರುವ ಲಕ್ಷಾಂತರ ಭಾರತೀಯರು ತವರಿಗೆ ಮರಳುವ ಪ್ರಯತ್ನದಲ್ಲಿದ್ದಾರೆ, ಮೂಲಗಳ ಪ್ರಕಾರ ಇವರನ್ನು ಭಾರತಕ್ಕೆ ವಾಪಸ್ ಕರೆತರಲು ಭಾರತ ಸರ್ಕಾರ ಬೃಹತ್ ಯೋಜನೆ ಸಿದ್ದಪಡಿಸುತ್ತಿದೆ.
ಈ ಹಿಂದೆ ಚೀನಾ ಸೇರಿದಂತೆ ವಿವಿಧ ರಾಷ್ಟ್ರಗಳಿಂದ ಕರೆತರಲಾಗಿದ್ದ ಭಾರತೀಯರಿಗೆ ಉಚಿತ ವಿಮಾನ ಪ್ರಯಾಣ ಸೇವೆ ನೀಡಲಾಗಿತ್ತು. ಆದರೆ ಈಗ ನಡೆಯುತ್ತಿರುವ ಕಾರ್ಯಾಚರಣೆ ಉಚಿತವಲ್ಲ. ಬದಲಿಗೆ ಪ್ರಯಾಣದ ಶುಲ್ಕವನ್ನು ಪ್ರಯಾಣಿಕರೇ ಭರಿಸಬೇಕಾಗುತ್ತದೆ ಎಂದು ಹೇಳಲಾಗಿದೆ. ವಿದೇಶಗಳಿಂದ ಬರುವ ಭಾರತೀಯರ ಪರೀಕ್ಷೆ, ಕ್ವಾರಂಟೈನ್ ಇತ್ಯಾದಿ ವ್ಯವಸ್ಥೆಯನ್ನು ರಾಜ್ಯ ಸರ್ಕಾರಗಳೇ ಮಾಡಬೇಕೆಂದು ಸೂಚಿಸಲಾಗಿದೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.