ಕೋಲಾರ (www.vknews.com) : ಜಿಲ್ಲೆಯ ಮುಳಬಾಗಿಲು ತಾಲೂಕಿನ ಬೊಮ್ಮಸಂದ್ರದಲ್ಲಿ ಗ್ರಾಮದಲ್ಲಿ ಆಶಾ ಕಾರ್ಯಕರ್ತೆಯ ಮೇಲೆ ಹಲ್ಲೆ ಮಾಡಿರುವ ಘಟನೆ ನಡೆದಿದೆ. ಬೊಮ್ಮಸಂದ್ರ ಗ್ರಾಮದ ಆಶಾ ಕಾರ್ಯಕರ್ತೆ ಮುನಿರತ್ನಮ್ಮ ಎಂಬುವರ ಮೇಲೆ ಗಂಗಾಧರ (25) ಮದ್ಯ ಸೇವಿಸಿ ಪಾನಮತ್ತನಾಗಿ ಹಲ್ಲೆ ಮಾಡಿದ್ದಾನೆ ಎಂಬ ಆರೋಪ ಕೇಳಿ ಬಂದಿದೆ.
ಬೊಮ್ಮಸಂದ್ರ ಗ್ರಾಮಕ್ಕೆ ಹೊಸದಾಗಿ ಬಂದವರ ಮಾಹಿತಿ ಕಲೆ ಹಾಕುತ್ತ,ಆರೋಗ್ಯ ಇಲಾಖೆ ಸೂಚನೆಯಂತೆ ಗ್ರಾಮದಲ್ಲಿ ಕೊರೊನಾ ಸರ್ವೇ ಮಾಡುವ ಸಾಮಾಜಿಕ ಅಂತರ ಕಾಪಾಡಿ ಎಂದಿದ್ದಕ್ಕೆ ಹಲ್ಲೆ ಮಾಡಲಾಗಿದೆ ಎನ್ನಲಾಗಿದೆ. ಕಿವಿಯಲ್ಲಿ ರಕ್ತ ಬರುವಂತೆ ಆಶಾ ಕಾರ್ಯಕರ್ತೆ ಮೇಲೆ ಹಲ್ಲೆ ಮಾಡಿದ್ದು ಮುನಿರತ್ನಮ್ಮ ಮುಳಬಾಗಿಲು ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದ್ದು ಚಿಕಿತ್ಸೆ ಪಡೆಯುತ್ತಿದ್ದಾರೆ.
ಈ ಈ ಸಂಬಂಧ ಮುಳಬಾಗಿಲು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.
ಈ ವಿಡಿಯೋ ವೀಕ್ಷಿಸಿ
ವರದಿ : ನಯನ್ ಮಹೇಶ್
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.