ತಿರುವನಂತಪುರಂ(ವಿಶ್ವಕನ್ನಡಿಗ ನ್ಯೂಸ್): ಕೋವಿಡ್-19 ಕೊರೊನಾ ವೈರಸ್ ನಿಂದ ವಿಶ್ವವೇ ತತ್ತರಿಸಿ ಹೋಗಿದ್ದು ವಿದೇಶಗಳಲ್ಲಿ ಸಿಲುಕಿರುವ ಅನಿವಾಸಿಗರನ್ನು ವಾಪಸ್ ಕರೆತರುವ ಪ್ರಕ್ರಿಯೆಯ ಅಂಗವಾಗಿ ಇಂದು ಅಬುಧಾಬಿಯಿಂದ 177 ಪ್ರಯಾಣಿಕರನ್ನು ಹೊತ್ತ ವಿಮಾನವು ಕೊಚ್ಚಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂದಿಳಿದಿದೆ.
ವಿಮಾನದಲ್ಲಿ 49 ಗರ್ಭಿಣಿ ಮಹಿಳೆಯರು ಸೇರಿ 177 ಪ್ರಯಾಣಿಕರಿದ್ದರು, ಪ್ರಯಾಣಿಕರಲ್ಲಿ ಯಾವುದೇ ಕೋವಿಡ್ ಪ್ರಕರಣಗಳು ಕಂಡು ಬಂದಿಲ್ಲ.
ಒಂದು ವಾರಗಳಲ್ಲಿ ನಡೆಯುವ ಪ್ರಕ್ರಿಯೆಯಲ್ಲಿ ಸುಮಾರು 15000 ಭಾರತೀಯರನ್ನು ಸ್ವದೇಶಕ್ಕೆ ಕರೆಸಲಾಗುವುದು ಎಂದು ತಿಳಿದಿದೆ. ಇವರಿಗೆ ಬೇಕಾದ ಕ್ವಾರಂಟೈನ್ ಸಜ್ಜೀಕರಣಗಳು ಸಜ್ಜಾಗಿದೆ ಎಂದು ಮೂಲಗಳು ತಿಳಿಸಿವೆ.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.