ಚಿಕ್ಕಬಳ್ಳಾಪುರ(ವಿಶ್ವಕನ್ನಡಿಗ ನ್ಯೂಸ್): ಕನ್ನಡ ಪುಸ್ತಕ ಪ್ರಾಧಿಕಾರದ ವತಿಯಿಂದ, ಜನವರಿ 2019 ರಿಂದ ಡಿಸೆಂಬರ್ 2019ರ ಅವಧಿಯಲ್ಲಿ ಕನ್ನಡದಲ್ಲಿ ಪ್ರಕಟವಾದ ಕೃತಿಗಳಿಗೆ, ಅವುಗಳ ಮುದ್ರಣ, ಮುಖಪುಟ ವಿನ್ಯಸ, ಗುಣಮಟ್ಟವನ್ನು ಪರಿಗಣಿಸಿ ವಿವಿಧ ಬಹುಮಾನಗಳಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿತ್ತು. ಕೋವಿಡ್-19ರ ಪರಿಸ್ಥಿತಿ ಹಿನ್ನೆಲೆಯಲ್ಲಿ ಪುಸ್ತಕ ಕಳಿಸುವ ಕೊನೆ ದಿನಾಂಕವನ್ನು 30 ಮೇ 2020ರ ವರೆಗೆ ವಿಸ್ತರಿಸಲಾಗಿದೆ.
ಆಸಕ್ತ ಪ್ರಕಾಶಕರು/ ಮುದ್ರಕರು/ ಕಲಾವಿದರು/ ಲೇಖಕರು ಸ್ವಯಂ ಅರ್ಜಿ ಸಲ್ಲಿಸಬಹುದಾಗಿದೆ. ಪುಸ್ತಕದ ಹೆಸರು, ಲೇಖಕರ ಹೆಸರು, ಪ್ರಕಟವಾದ ವರ್ಷ, ಪ್ರಕಾಶಕರ ಹೆಸರು, ಮುದ್ರಣಾಲಯದ ಹೆಸರು, ಮುಖಪುಟ ಚಿತ್ರ ರಚನೆಯ ಕಲಾವಿದರ ಹೆಸರು/ ಚಿತ್ರ ಕಲಾವಿದರ ಪೂರ್ಣ ವಿಳಾಸ – ಈ ಎಲ್ಲಾ ವಿವರಗಳೊಂದಿಗೆ ಪುಸ್ತಕದ ಎರಡು ಪ್ರತಿಗಳನ್ನು ಮೇ.30ರೊಳಗಾಗಿ ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಭವನ, ಜೆ.ಸಿ.ರಸ್ತೆ, ಬೆಂಗಳೂರು-560002- ಈ ವಿಳಾಸಕ್ಕೆ ಕಳುಹಿಸಿಕೊಡಬಹುದಾಗಿದೆ. ಸಲ್ಲಿಸಲಾಗುವ ಪುಸ್ತಕಗಳನ್ನು ಯಾವುದೇ ಕಾರಣಕ್ಕೂ ಹಿಂದಿರುಗಿಸಲಾಗುವುದಿಲ್ಲ.
ಹೆಚ್ಚಿನ ಮಾಹಿತಿಗಾಗಿ: ಆಡಳಿಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಭವನ, ಮೊದಲನೇ ಮಹಡಿ, ಜೆ.ಸಿ.ರಸ್ತೆ, ಬೆಂಗಳೂರು-560002 ವೆಬ್ ಸೈಟ್ www.kannadapustakapradhikara.com, ದೂರವಾಣಿ ಸಂಖ್ಯೆ: 080-22484516 /22107704 ಇಲ್ಲಿ ಸಂಪರ್ಕಿಸಬಹುದು ಎಂದು ಕನ್ನಡ ಪುಸ್ತಕ ಪ್ರಾಧಿಕಾರ ಆಡಳಿತಾಧಿಕಾರಿ ರವರು ತಿಳಿಸಿರುತ್ತಾರೆ.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.