ಚಿಕ್ಕಬಳ್ಳಾಪುರ (www.vknews.com) : ಕೋವಿಡ್-19 ಕಾರಣ ದೇಶದಲ್ಲಿ ಲಾಕ್ ಡೌನ್ ವಿಧಿಸಿದ ಹಿನ್ನೆಲೆಯಲ್ಲಿ ಜಿಲ್ಲೆಯ ಹೂವು ಬೆಳೆದ ರೈತರಿಗೆ ಆಗಿರುವ ನಷ್ಟಕ್ಕೆ ಪರಿಹಾರವಾಗಿ ಪ್ರತಿ ಹೆಕ್ಟೇರ್ ಗೆ ಗರಿಷ್ಟ ರೂ.25000/- ಗಳಂತೆ ಪರಿಹಾರಧನ ನೀಡಲಾಗುವುದು. ಫಲಾನುಭವಿಯು ಬೆಳೆದಿರುವ ಹೂವು ಬೆಳೆಯ ವಿಸ್ತೀರ್ಣಕ್ಕೆ ಅನುಗುಣವಾಗಿ ROPRATA ಆಧಾರಿಸಿ ಗರಿಷ್ಟ ಒಂದು ಹೆಕ್ಟೇರ್ ವಿಸ್ತೀರ್ಣಕ್ಕೆ ಮಿತಿಗೊಳಿಸಿ ಪರಿಹಾರಧನವನ್ನು ನೀಡಲಾಗುವುದು.
2019-20ನೇ ಸಾಲಿನಲ್ಲಿ ಕೈಗೊಳ್ಳಲಾದ ಬೆಳೆ ಸಮೀಕ್ಷೆ ಮಾಹಿತಿಯ ಆಧಾರಿಸಿ ಹೂವು ಬೆಳೆಗಾರರಿಗೆ ಪರಿಹಾರ ನೀಡಲಾಗುವುದು. ಋತುಮಾನಿಕ ಹೂವು ಬೆಳೆಗಳಿಗೆ (ಚೆಂಡು ಹೂ, ಸೇವಂತಿಗೆ, ಆಸ್ಟರ್, ಇತ್ಯಾದಿ) ಪರಿಹಾರ ನೀಡುವಾಗ ಹಿಂಗಾರು ಬೆಳೆ ಸಮೀಕ್ಷೆ ಮತ್ತು ಬಹುವಾರ್ಷಿಕ ಹೂ ಬೆಳೆಗಳಿಗೆ (ಗುಲಾಬಿ, ಕನಕಾಂಬರ, ಗ್ಲಾಡಿಯೋಲಸ್, ಬರ್ಡ್ ಆಫ್ ಪ್ಯಾರೆಡೈಸ್, ಇತ್ಯಾದಿ) ಮುಂಗಾರು ಬೆಳೆ ಸಮೀಕ್ಷೆಯ ಮಾಹಿತಿಯನ್ನು ಆಧಾರವಾಗಿರಿಸಿಕೊಂಡು ಪರಿಹಾರ ನೀಡಲಾಗುವುದು.
ಬೆಳೆ ಸಮೀಕ್ಷೆಯಲ್ಲಿ ಇರುವಂತೆ ಹೂ ಬೆಳೆಗಾರರ ಪಟ್ಟಿಯನ್ನು ಗ್ರಾಮಪಂಚಾಯತಿ, ರೈತ ಸಂಪರ್ಕ ಕೇಂದ್ರ ಹಾಗೂ ತಾಲ್ಲೂಕು ತೋಟಗಾರಿಕೆ ಕಛೇರಿಯ ನಾಮಫಲಕದಲ್ಲಿ ಪ್ರದರ್ಶಿಸಲಾಗುವುದು.
ರೈತರು ಬೆಳೆದಿರುವ ಹೂ ಬೆಳೆಗಳು 2019-20ನೇ ಸಾಲಿನ ಹಿಂಗಾರು/ಮುಂಗಾರು ಬೆಳೆ ಸಮೀಕ್ಷೆಯಲ್ಲಿ ದಾಖಲೆಯಾಗದಿದ್ದಲ್ಲಿ ಅಂತಹ ರೈತರುಗಳು ಅರ್ಜಿಯನ್ನು ಸಂಬಂಧಪಟ್ಟ ಆಯಾ ತಾಲ್ಲೂಕು ತೋಟಗಾರಿಕೆ ಕಛೇರಿಗಳಿಗೆ RTC, ಆಧಾರ್ ಕಾರ್ಡ್ , ರೈತರ ಬ್ಯಾಂಕ್ ಪುಸ್ತಕದ ಜೆರಾಕ್ಸ್ ಪ್ರತಿಯೊಂದಿಗೆ ಸಲ್ಲಿಸುವುದು. ಈ ರೈತರುಗಳ ತಾಕುಗಳನ್ನು ಹೋಬಳಿ ಸಹಾಯಕ ತೋಟಗಾರಿಕೆ ಅಧಿಕಾರಿ, ಕೃಷಿ ಅಧಿಕಾರಿ ಮತ್ತು ಗ್ರಾಮಲೆಕ್ಕಿಗರನ್ನೊಳಗೊಂಡ ಸಮಿತಿಯು ಪರಿಶೀಲನೆ ಮಾಡಿ ಸ್ಥಳೀಯವಾಗಿ ಪಂಚನಾಮೆ ಮಾಡುವ ಆಧಾರದ ಮೇರೆಗೆ ಪರಿಹಾರ ವಿತರಿಸಲಾಗುವುದು.
ಹೆಚ್ಚಿನ ಮಾಹಿತಿಗಾಗಿ ಸಂಬಂಧಪಟ್ಟ ತಾಲ್ಲೂಕು ತೋಟಗಾರಿಕೆ ಕಛೇರಿಗಳಿಗೆ ಹಾಗೂ ಹೋಬಳಿ ಮಟ್ಟದ ತೋಟಗಾರಿಕೆ ಅಧಿಕಾರಿಗಳನ್ನು ಸಂಪರ್ಕಿಸುವುದು.
ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು (ಜಿಪಂ) ಚಿಕ್ಕಬಳ್ಳಾಪುರ–9342959690, ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು (ಜಿಪಂ) ಚಿಂತಾಮಣಿ–9902581832, ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು (ಜಿಪಂ) ಗೌರಿಬಿದನೂರು–9964749681, ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು (ಜಿಪಂ) ಶಿಡ್ಲಘಟ್ಟ–9448636496, ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು (ಜಿಪಂ) ಬಾಗೇಪಲ್ಲಿ–9945424437, ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು (ಜಿಪಂ) ಗುಡಿಬಂಡೆ–9964749681,ಇವರನ್ನು ಸಂಪರ್ಕಿಸಬೇಕೆಂದು ತೋಟಗಾರಿಕೆ ಉಪ ನಿರ್ದೇಶಕರಾದ ಕುಮಾರಸ್ವಾಮಿ ರವರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.