ಚಿಕ್ಕಬಳ್ಳಾಪುರ (www.vknews.com) : ದಿನಾಂಕ 15-05-2020ನೇ ಮಧ್ಯರಾತ್ರಿ 1-55 ಗಂಟೆ ಸಮಯದಲ್ಲಿ ನಿಧನರಾದ ಕರ್ನಾಟಕ ರಾಜ್ಯ ಅಥ್ಲೆಟಿಕ್ಸ್ ಅಸೋಸಿಯೇಷನ್ನ ಮಾಜಿ ಅಧ್ಯಕ್ಷರು ಹಾಗೂ ಜಯ ಕರ್ನಾಟಕ ಸಂಘಟನೆಯ ಸಂಸ್ಥಾಪಕರಾದ ಮುತ್ತಪ್ಪ ರೈ ರವರಿಗೆ ಚಿಕ್ಕಬಳ್ಳಾಪುರ ನಗರದ ಶಿಡ್ಲಘಟ್ಟ ವೃತ್ತದಲ್ಲಿ 2 ನಿಮಿಷಗಳ ಕಾಲ ಮೌನಾಚರಣೆಯ ಮೂಲಕ ಆಚರಿಸಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಅಂತರಾಷ್ಟ್ರೀಯ ಕ್ರೀಡಾಪಟು ಮಂಚನಬಲೆ ಶ್ರೀನಿವಾಸ್ರವರು ಮುತ್ತಪ್ಪ ರೈ ರವರು ಮಂಗಳೂರು ಜಿಲ್ಲೆಯ ಪುತ್ತೂರಿನಲ್ಲಿ ಜನಿಸಿದರು, ಕೆನರಾಬ್ಯಾಂಕಿನ ಉದ್ಯೋಗಿಯಾಗಿದ್ದರು, ಉದ್ಯೋಗವನ್ನು ತ್ಯಜಿಸಿ ನಂತರ ಅಂತರಾಷ್ಟ್ರೀಯ ಮಟ್ಟದ ಭೂಗತಲೋಕದಲ್ಲಿ ಮೆರೆದರು. ಕೊನೆಗೆ ಎಲ್ಲವನ್ನೂ ತ್ಯಜಿಸಿ ಜಯ ಕರ್ನಾಟಕ ಸಂಘಟನೆಯನ್ನು ಸ್ಥಾಪಿಸಿ ಆ ಮೂಲಕ ಗಡಿ, ನೆಲ, ನಾಡು, ನುಡಿ ಹಾಗೂ ಜನರ ಸೇವೆಯನ್ನು ಮಾಡಿಕೊಳ್ಳುತ್ತಾ ಬಂದರು.
ರಾಜ್ಯದಲ್ಲೆಡೆ ಸುಮಾರು 40 ಲಕ್ಷಕ್ಕೂ ಹೆಚ್ಚು ಜನ ಜಯ ಜಯಕರ್ನಾಟಕದ ಸದಸ್ಯರಾಗಿರುವುದು ಹೆಮ್ಮೆಯ ವಿಚಾರ. ಸಂಘಟನೆಯ ಜೊತೆಗೆ ಕ್ರೀಡೆಗೂ ಸಹ ಹೆಚ್ಚಿನ ಪ್ರೋತ್ಸಾಹ ನೀಡುತ್ತಿದ್ದು, ಕರ್ನಾಟಕ ರಾಜ್ಯ ಅಥ್ಲೆಟಿಕ್ ಅಸೋಸಿಯೇಷನ್ನ ಅಧ್ಯಕ್ಷರಾಗಿ 2 ವರ್ಷ ಸೇವೆ ಸಲ್ಲಿಸಿರುತ್ತಾರೆ.
ಜೊತೆಗೆ ಅವರ ನಿವಾಸದ ಬಳಿ ರಾಜ್ಯಮಟ್ಟದ ಗುಡ್ಡಗಾಡು ಓಟದ ಸ್ಪರ್ಧೆಯನ್ನು ಆಯೋಜನೆ ಮಾಡುವುದರ ಜೊತೆಗೆ ಗ್ರಾಮೀಣ ಪ್ರದೇಶಗಳಲ್ಲಿ ಯುವ ಕ್ರೀಡಾಪಟುಗಳನ್ನು ಗುರುತಿಸುವ ಉದ್ದೇಶದಿಂದ ಅನೇಕ ಕ್ರೀಡಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದ್ದರು ಆದರೆ ದುರಾದೃಷ್ಟವಶಾತ್ ಕ್ಯಾನ್ಸರ್ ಕಾಯಿಲೆಯಿಂದ ನಿಧನರಾಗಿರುವುದು ಕ್ರೀಡಾಕ್ಷೇತ್ರಕ್ಕೆ ನೋವಿನ ಸಂಗತಿಯಾಗಿದೆಂದು ವಿಷಾದ ವ್ಯಕ್ತಪಡಿಸಿದರು.
ಶ್ರದ್ಧಾಂಜಲಿ ಸಭೆಯಲ್ಲಿ ಜಿಲ್ಲಾ ಅಥ್ಲೆಟಿಕ್ ಅಸೋಸಿಯೇಷನ್ನ ಮಂಜುನಾಥ್, ಭರತ್ಕುಮಾರ್ ಜಯ ಕರ್ನಾಟಕ ಸಂಘಟನೆಯ ಜಿಲ್ಲಾಧ್ಯಕ್ಷ ಶ್ರೀನಿವಾಸ್, ಜಿಲ್ಲಾ ಉಪಾಧ್ಯಕ್ಷ ಸಿ.ವಿ.ವೆಂಕಟೇಶ್, ಜಿಲ್ಲಾ ಕಾರ್ಯದರ್ಶಿ ನಾಗರಾಜ್, ನಂದಿ ಹೋಬಳಿ ಅಧ್ಯಕ್ಷ ರವಿ, ಮುತ್ತು, ಅಜಯ್, ಮುಂತಾದವರು ಉಪಸ್ಥಿತರಿದ್ದರು.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.