(www.vknews.com) : ಬಂಟ್ವಾಳ ತಾಲೂಕು ಮುಸ್ಲಿಂ ಜಮಾತ್ ವತಿಯಿಂದ ನೂರಾರು ನಿರ್ಗತಿಕ ಕುಟುಂಬಗಳಿಗೆಈದ್ ಕಿಟ್ ವಿತರಿಸಲಾಯಿತು. ಪಾಣೆಮಂಗಳೂರಿನ ಸಾಗರ್ ಆಡಿಟೋರಿಯಂ ನಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ರಾಜ್ಯ ಮುಸ್ಲಿಂ ಜಮಾತ್ ಪ್ರಧಾನ ಕಾರ್ಯದರ್ಶಿ ಹಾಗೂ ರಾಜ್ಯ ವಖಫ್ ಮಂಡಳಿ ಸದಸ್ಯ ಮೌಲಾನ ಶಾಫಿ ಸಅದಿ ಮುಖ್ಯ ಅತಿಥಿಯಾಗಿ ಬಾಗವಹಿಸಿ ಮಾತನಾಡಿದರು .
ಮುಂದಿನ ದಿನಗಳಲ್ಲಿ ತಾಲೂಕು ಮುಸ್ಲಿಂ ಸಮಿತಿಯು,ಸಮಾಜದ ಎಲ್ಲಾ ವರ್ಗದ ನಾಯಕರನ್ನು ಸೇರಿಸಿ ಮುಸ್ಲಿಂ ಸಮುದಾಯದ ಶೈಕ್ಷಣಿಕ ಸಾಮಾಜಿಕ-ಆರ್ಥಿಕ ಧಾರ್ಮಿಕಅಭಿವೃದ್ಧಿಗೆ ಶ್ರಮಿಸಬೇಕು.ಸಮಾಜ ಮತ್ತು ಸಮುದಾಯದ ಒಗ್ಗಟ್ಟಿನಲ್ಲಿ ಪ್ರಮುಖ ಪಾತ್ರ ವಹಿಸಿ, ಧಾರ್ಮಿಕ ಸೌಹಾರ್ದತೆಗೆ ಪ್ರಥಮ ಆದ್ಯತೆ ನೀಡಬೇಕೆಂದು ಹೇಳಿದರು.
ತಾಲೂಕು ಮುಸ್ಲಿಂ ಜಮಾತ್ ಅಧ್ಯಕ್ಷ ತೌಫಿಕ್ ರಫೀಕ್ ಹಾಜಿ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಧಾನ ಕಾರ್ಯದರ್ಶಿ ಅನ್ವರ್ ಗೂಡಿನಬಳಿ, ಉಪಾಧ್ಯಕ್ಷರುಗಳಾದ ಬಶೀರ್ ಹಾಜಿ ಕುಂಬ್ರ, ಮುತ್ತಲಿಬ್ ಹಾಜಿ ನಾರ್ಶ, ಇಸ್ಮೈಲ್ ಬಂಟ್ವಾಳ ರಶೀದ್ ಒಗ್ಗ, ಇಸ್ಮಾಯಿಲ್ ಮಾಸ್ಟರ್ ಮಂಗಿಲಪದವು ಉಸ್ಮಾನ್ ಹಾಜಿ ಅಬೂಬಕರ್ ಕಡೇಶಿವಾಲಯ ಮುಂತಾದವರು ಭಾಗವಹಿಸಿದ್ದರು.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.