(www.vknews.com) : ಕೋವಿಡ್ -19 ಹರಡಿದ ಹಿನ್ನೆಲೆಯಲ್ಲಿ ಈ ವರ್ಷ 1 ರಿಂದ +2 ವರೆಗಿನ ಮದ್ರಸ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸದೆ ಮುಂದಿನ ತರಗತಿಗೆ ಭಡ್ತಿ ನೀಡಲು ಸಮಸ್ತ ಕೇರಳ ಇಸ್ಲಾಮಿಕ್ ಧಾರ್ಮಿಕ ಶಿಕ್ಷಣ ಮಂಡಳಿಯ ಕಾರ್ಯಕಾರಿ ಸಮಿತಿ ನಿರ್ಧರಿಸಿದೆ.
ಐದು, ಏಳು, 10 ಮತ್ತು +2 ತರಗತಿಗಳ ಪಬ್ಲಿಕ್ ಪರೀಕ್ಷೆಗೆ ನೋಂದಾಯಿಸಿಕೊಂಡ ವಿದ್ಯಾರ್ಥಿಗಳಿಗೆ ಉನ್ನತ ವ್ಯಾಸಂಗಕ್ಕೆ ಸರ್ಟಿಫಿಕೇಟ್ ನೀಡಲಾಗುವುದು. ಶವ್ವಾಲ್ 9 (ಜೂನ್ 1) ರಿಂದ ಆನ್ ಲೈನ್ ತರಗತಿಗಳು ಪ್ರಾರಂಭವಾಗಲಿವೆ. ಒಂದರಿಂದ ಹನ್ನೆರಡು ತರಗತಿಗಳವರೆಗೆ ಎಲ್ಲಾ ವಿಷಯಗಳಲ್ಲೂ ಆನ್ಲೈನ್ ತರಗತಿಗಳು ನಡೆಯಲಿವೆ. ತಜ್ಞರ ತಂಡವು ವ್ಯವಸ್ಥೆಗಳನ್ನು ಅಂತಿಮಗೊಳಿಸುವ ಪ್ರಕ್ರಿಯೆಯಲ್ಲಿದ್ದಾರೆ. ವಿದ್ಯಾರ್ಥಿಗಳಿಗೆ ಆನ್ಲೈನ್ ಕಲಿಕೆಗೆ ಅವಶ್ಯವಾದ ವ್ಯವಸ್ಥೆಗಳನ್ನು ಮಾಡಿ ಕೊಡಲು ಮದರಸಾ ಸಮಿತಿ ಹಾಗೂ ಪೋಷಕರು ತಯಾರಾಗಬೇಕೆಂದು ಸಭೆ ಒತ್ತಾಯಿಸಿತು.
ಸಮಸ್ಥ ಕೇರಳ ಇಸ್ಲಾಮಿಕ್ ಧಾರ್ಮಿಕ ಶಿಕ್ಷಣ ಮಂಡಳಿಯ ಅಧಿಕೃತ ಚಾನೆಲ್, ಸಮಸ್ತ ಆನ್ಲೈನ್ ಪಾಣಕ್ಕಾಡ್ ಸೈಯದ್ ಹೈದರ್ ಅಲಿ ಶಿಹಾಬ್ ತಂಙಳ್ ಹಾಗೂ ಆನ್ಲೈನ್ ತರಗತಿಗಳನ್ನು ಸೈಯದ್ ಮುಹಮ್ಮದ್ ಜಿಫ್ರಿ ಮುತ್ತು ಕೋಯಾ ತಂಙಳ್ ಉದ್ಘಾಟಿಸಿದರು.
ಪ್ರಕಟಣೆ :-ಮುಹಮ್ಮದ್ ರಫೀಕ್ ಹಾಜಿ ಕೊಡಾಜೆ ಪ್ರಧಾನ ಕಾರ್ಯದರ್ಶಿ ದ.ಕ.ಜಿಲ್ಲಾ ಮದ್ರಸ ಮೆನೇಜ್ಮೆಂಟ್ ಅಸೋಸಿಯೇಷನ್
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.