ಶಿಡ್ಲಘಟ್ಟ,(ವಿಶ್ವಕನ್ನಡಿಗ ನ್ಯೂಸ್) : ಲಾಕ್ಡೌನ್ ಅವಧಿಯಲ್ಲಿ ಬಾರ್ ಅಂಡ್ ರೆಸ್ಟೋರೆಂಟಿನಲ್ಲಿ ಮದ್ಯವನ್ನು ದುಬಾರಿ ಬೆಲೆಗೆ ಮಾರಾಟ ಮಾಡಿ ಕಳ್ಳತನ ನಡೆದಂತೆ ನಾಟಕ ಮಾಡಿದ್ದ ಕೆಲಸಗಾರರನನ್ನು ಬಂಧಿಸಿದ ಗ್ರಾಮಾಂತರ ಪೋಲಿಸರು ನಗದು ಸೇರಿದಂತೆ ಸುಮಾರು ಒಂದೂವರೆ ಲಕ್ಷ ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಳ್ಳುವುದರಲ್ಲಿ ಯಶಸ್ವಿಯಾಗಿದ್ದಾರೆ.
ತಾಲೂಕಿನ ಜೆ.ವೆಂಕಟಾಪುರದ ಗ್ರಾಮದ ಸ್ವಸ್ತಿಕ್ ಬಾರ್ ಅಂಡ್ ರೆಸ್ಟೋರೆಂಟಿನಲ್ಲಿ ಕೆಲಸ ಮಾಡುತ್ತಿದ್ದ ಗೌರಿಬಿದನೂರು ತಾಲೂಕಿನ ದಿನೇಶ್ ಎಂಬಾತನ್ನು ಬಂಧಿಸಿರುವ ಪೋಲಿಸರು ಆತನನಿಂದ ನಗದು ಸೇರಿದಂತೆ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ ಎಂದು ಜಿಲ್ಲಾ ಎಸ್ಪಿ ಮಿಥುನ್ ಕುಮಾರ್ ತಿಳಿಸಿದ್ದಾರೆ.
ನಗರದಲ್ಲಿ ಸುಧ್ಧಿಗಾರರೊಂದಿಗೆ ಮಾತನಾಡಿದ ಅವರು ಲಾಕ್ಡೌನ್ ಸಮಯದಲ್ಲಿ ಮದ್ಯವನ್ನು ದುಬಾರಿ ಬೆಲೆಗೆ ಮಾರಾಟ ಮಾಡಿದ್ದ ದಿನೇಶ್ ಅಬಕಾರಿ ನಿರೀಕ್ಷಕರು ದಾಸ್ತಾನು ನೋಡಲು ಬರುತ್ತಿದ್ದಾರೆ ಎಂದು ಮಾಹಿತಿಯನ್ನು ಅರಿತು ಬಾರ್ನಲ್ಲಿ ಕಳ್ಳತನ ನಡೆದಂತೆ ನಾಟಕ ಮಾಡಿ ಗ್ರಾಮಾಂತರ ಪೋಲಿಸ್ಠಾಣೆಯಲ್ಲಿ ದೂರು ದಾಖಲಿಸಿದ್ದರು ಈ ಸಂಬಂಧ ದೂರು ದಾಖಲಿಸಿಕೊಂಡು ತನಿಖೆ ಕೈಗೊಂಡ ಪೋಲಿಸರು ದಿನೇಶ್ನನ್ನು ಬಂಧಿಸಿ ಪ್ರಕರಣವನ್ನು ಭೇದಿಸುವುದರಲ್ಲಿ ಯಶಸ್ವಿಯಾಗಿದ್ದಾರೆ ಎಂದರು.
ಸುಧ್ಧಿಗೋಷ್ಠಿಯಲ್ಲಿ ಡಿವೈಎಸ್ಪಿ ಶ್ರೀನಿವಾಸ್,ಸಿಪಿಐ ಸುರೇಶ್,ಪಿಎಸ್ಐ ಲಿಯಾಖುತ್ತುಲ್ಲಾ ಮತ್ತು ಸಿಬ್ಬಂದಿ ಉಪಸ್ಥಿತರಿದ್ದರು.
ವರದಿ: ಎಂ.ಎ.ತಮೀಮ್ ಪಾಷ ಶಿಡ್ಲಘಟ್ಟ
ವರದಿಗಾರರು, ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.