ಮಂಗಳೂರು(ವಿಶ್ವಕನ್ನಡಿಗ ನ್ಯೂಸ್): ದಿನಾಂಕ: 25-05-2020 ರಂದು ಸೋಮವಾರ ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕ ದಳ ಮತ್ತು ಪೌರರಕ್ಷಣಾ ಪಡೆ ಸಿಬ್ಬಂದಿಗಳಿಗೆ ಮುಲ್ಲಕಾಡು ಫ್ರೆಂಡ್ಸ್ ಸರ್ಕಲ್ ರಿಜಿಸ್ಟರ್ಡ್ ಮಂಗಳೂರು ಇದರ ವತಿಯಿಂದ 25 ಸ್ಯಾನಿಟೈಸರ್ಗಳನ್ನು (500mಟ) ಮತ್ತು ಸ್ಯಾನಿಟೈಸರ್ ಸ್ಟ್ಯಾಂಡ್ನ್ನು ವಿತರಿಸಲಾಯಿತು.
ಈ ಸಂದರ್ಭದಲ್ಲಿ ಮಂಗಳೂರು ವಿಮಾನ ನಿಲ್ದಾಣದ ಸಂಪರ್ಕಾಧಿಕಾರಿಗಳಾದ ಶ್ರೀ ಗೋಪಾಲಕೃಷ್ಣ ಕುಂದರ್ ಇವರು ಮಾತನಾಡಿ, ಡಾ|| ಮುರಲೀ ಮೋಹನ್ ಮೋಹನ್ ಚೂಂತಾರು ಗೃಹರಕ್ಷಕದಳದ ಸಮಾದೇಷ್ಟರು ಮತ್ತು ಪೌರರಕ್ಷಣಾ ಪಡೆಯ ಚೀಫ್ ವಾರ್ಡನ್ ಇವರ ನೇತೃತ್ವದಲ್ಲಿ ಸಮಾಜದ ಸ್ವಾಸ್ಥ್ಯವನ್ನು ಕಾಪಾಡುವಲ್ಲಿ ಗೃಹರಕ್ಷಕ ದಳ ಮತ್ತು ನಾಗರಿಕ ಪೌರರಕ್ಷಣಾ ಪಡೆಯ ಸಿಬ್ಬಂದಿಗಳು ಜೀವದ ಹಂಗು ತೊರೆದು ಈ ಕೋವಿಡ್-19 ಸಂದರ್ಭದಲ್ಲಿ ಅತ್ಯುತ್ತಮವಾದ ಸಾಮಾಜಿಕ ಸೇವೆಯನ್ನು ಸಲ್ಲಿಸುತ್ತಿದ್ದಾರೆ.
ಮುಲ್ಲಕಾಡು ಫ್ರೆಂಡ್ಸ್ ಸರ್ಕಲ್ ರಿಜಿಸ್ಟರ್ ಮಂಗಳೂರು ಮತ್ತು ಸಹ್ಯಾದ್ರಿ ಇಂಜಿನಿಯರಿಂಗ್ ಕಾಲೇಜು ಇವರುಗಳು ಜಂಟಿಯಾಗಿ ಗೃಹರಕ್ಷಕರು ಮತ್ತು ಪೌರರಕ್ಷಣಾ ಪಡೆಯ ಸಿಬ್ಬಂದಿಗಳಿಗೆ ಸ್ಯಾನಿಟೈಸರ್ ಮತ್ತು ಸ್ಯಾನಿಟೈಸರ್ ಸ್ಟ್ಯಾಂಡ್ಗಳನ್ನು ನೀಡಿರುವುದು ತುಂಬಾ ಹೆಮ್ಮೆ ಅನಿಸುತ್ತದೆ. ಮತ್ತೋರ್ವ ಅತಿಥಿಗಳಾದ ಸಹ್ಯಾದ್ರಿ ಇಂಜಿನಿಯರ್ ಕಾಲೇಜಿನ ಪ್ರೊಫೆಸರ್ ಡಾ|| ಅನಂತಪ್ರಭು ರವರು ಮಾತನಾಡಿ ಕೋವಿಡ್-19 ಕರ್ತವ್ಯ ನಿರ್ವಹಿಸುವ ಗೃಹರಕ್ಷಕರಿಗೆ ಹೆಚ್ಚುತ್ತಿರುವ ಕೊರೋನಾ ಹಾವಳಿಯಿಂದ ತಮ್ಮ ಆರೋಗ್ಯ ಕಾಪಾಡಿಕೊಳ್ಳಲು ಸ್ಯಾನಿಟೈಸರ್ ಮತ್ತು ಸ್ಯಾನಿಟೈಸರ್ ಸ್ಟ್ಯಾಂಡ್ಗಳನ್ನು ನೀಡಲಾಗಿದೆ ಎಂದರು.
ಸ್ವಚ್ಛತೆಗಾಗಿ ಸ್ಯಾನಿಟೈಸರ್ನ್ನು ಬಳಸಬೇಕು ಹಾಗೂ ಕೊರೋನಾ ಮಹಾಮಾರಿಯಿಂದ ನಮ್ಮನ್ನು ನಾವು ಮೊದಲು ರಕ್ಷಿಸಿಕೊಳ್ಳಬೇಕು ಎಂದು ಗೃಹರಕ್ಷಕರಿಗೆ ಕರೆ ನೀಡಿದರು. ಈ ಸಂದರ್ಭದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕ ದಳದ ಸಮಾದೇಷ್ಟರಾದ ಡಾ|| ಮುರಲೀ ಮೋಹನ ಚೂಂತಾರು ರವರು ಅಧ್ಯಕ್ಷತೆಯನ್ನು ವಹಿಸಿದ್ದರು. ಈ ಸಂದರ್ಭದಲ್ಲಿ ಮುಲ್ಲಕಾಡು ಫ್ರೆಂಡ್ಸ್ ಸರ್ಕಲ್ ರಿಜಿಸ್ಟರ್ ಮಂಗಳೂರು ಇದರ ಅಧ್ಯಕ್ಷರು, ಶ್ರೀ ರಾಜೇಶ್ ಕದ್ರಿ, ಶ್ರೀ ಚರಣ್ ದೇವಾಡಿಗ, ಶ್ರೀ ಪವನ್ ಶೆಟ್ಟಿ, ಶ್ರೀ ಗಣೇಶ್ ಮತ್ತು ಸರ್ವಸದಸ್ಯರು ಹಾಗೂ ಗೃಹರಕ್ಷಕರಾದ ದಿವಾಕರ್, ಲಿಂಗಪ್ಪ, ಮಹೇಶ್ ಉಪಸ್ಥಿತರಿದ್ದರು.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.