ಮಂಗಳೂರು(ವಿಶ್ವಕನ್ನಡಿಗ ನ್ಯೂಸ್): ನಿತ್ಯ ಜನರ ಮಧ್ಯೆ ಇದ್ದು ಕೊಂಡು, ತಮ್ಮ ಜೀವದ ಹಂಗು ತೊರೆದು ಹಗಲು-ರಾತ್ರಿ ಕರ್ತವ್ಯ ನಿರ್ವಹಿಸುತ್ತಿರುವ ಜಿಲ್ಲೆಯ ಪೊಲೀಸ್ ಸಿಬ್ಬಂದಿ ಗಳಿಗೆ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ಭಾರತೀಯ ಹೋಮಿಯೋಪತಿ ವೈದ್ಯರ ಸಂಘದ ವತಿಯಿಂದ ಹೋಮಿಯೋಪತಿ ಆರೋಗ್ಯ ವರ್ಧಕ ಔಷಧಿ ಯನ್ನು ಉಚಿತವಾಗಿ ವಿತರಿಸಲಾಯಿತು.
ಆಯುಷ್ ಮಂತ್ರಾಲಯ ಸೂಚಿಸಿದ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಿಕೊಳ್ಳುವ ಹೋಮಿಯೋಪತಿ ಔಷಧಿ ಯನ್ನು ಇಂದು ಜಿಲ್ಲಾ ಪೊಲೀಸ್ ಅಧೀಕ್ಷಕ ರಾದ ಬಿ. ಎಂ ಲಕ್ಷ್ಮಿ ಪ್ರಸಾದ್ ಅವರಿಗೆ ಅವರ ಕಚೇರಿಯಲ್ಲಿ ಸಂಘದ ಪರವಾಗಿ ಹಸ್ತಾಂತರ ಮಾಡಲಾಯಿತು ಹಾಗೂ ಇದನ್ನು ಜಿಲ್ಲೆಯ ಎಲ್ಲಾ ಪೊಲೀಸ್ ಸಿಬ್ಬಂದಿಗಳಿಗೆ ಹಂಚಿಕೆ ಮಾಡಲಾಗುವುದು ಎಂದು ಅಧೀಕ್ಷಕರು ತಿಳಿಸಿದರು.
ಹಾಗೆಯೆ ಮಂಗಳೂರು ಕಮಿಷನರೇಟ್ ವಲಯದ ಸುಮಾರು 2000 ಸಿಬ್ಬಂದಿ ಗಳಿಗೆ ವಿತರಣೆ ಮಾಡುವ ಸಲುವಾಗಿ ಉಚಿತ ಹೋಮಿಯೋಪತಿ ಆರೋಗ್ಯ ವರ್ಧಕ ಔಷಧಿಯನ್ನು ನಾಳೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯವರಿಗೆ ಹಸ್ತಾಂತರ ಮಾಡಲಾಗುವುದು ಎಂದು ಐಎಚ್ಎಂಎ ಮಂಗಳೂರು ಘಟಕದ ಅಧ್ಯಕ್ಷರಾದ ಡಾ. ಪ್ರವೀಣ್ ಕುಮಾರ್ ರೈ ಪ್ರಕಟಣೆ ಯಲ್ಲಿ ತಿಳಿಸಿದ್ದಾರೆ.
ಈ ಸಂದರ್ಭದಲ್ಲಿ ಭಾರತೀಯ ಹೋಮಿಯೋಪತಿ ವೈದ್ಯರ ಸಂಘದ ಅಧ್ಯಕ್ಷರಾದ ಡಾ. ಪ್ರವೀಣ್ ಕುಮಾರ್ ರೈ, ಕಾರ್ಯದರ್ಶಿಯಾದ ಡಾ. ಅವಿನಾಶ್ ವಿ. ಎಸ್ ಹಾಗೂ ಡಾ. ಪ್ರಸನ್ನ ಕುಮಾರ್ ಅವರು ಉಪಸ್ಥಿತರಿದ್ದರು.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.