ಶಿಡ್ಲಘಟ್ಟ,(ವಿಶ್ವಕನ್ನಡಿಗ ನ್ಯೂಸ್) : ಜಮೀನಿನ ಖಾತೆ ಮಾಡಿಕೊಡಲು 1 ಲಕ್ಷ ರೂಗಳು ಲಂಚ ಸ್ವೀಕರಿಸುತ್ತಿದ್ದ ಕಸಬಾ ರಾಜಸ್ವ ನಿರೀಕ್ಷಕ ಹಾಗೂ ನಗರ ಗ್ರಾಮ ಲೆಕ್ಕಾಧಿಕಾರಿ ಭ್ರಷ್ಟಚಾರ ನಿಗ್ರಹದಳ (ಎಸಿಬಿ) ಬಲೆಗೆ ಸಿಕ್ಕಿಬಿದ್ದಿದ್ದಾರೆ.
ಕಸಬಾ ರಾಜಸ್ವ ನಿರೀಕ್ಷಕ ವಿಶ್ವನಾಥ್ ಹಾಗೂ ನಗರ ಗ್ರಾಮ ಲೆಕ್ಕಾಧಿಕಾರಿ ಗೋಕುಲ್ ಒಂದು ಲಕ್ಷ ರೂಗಳು ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದಿದ್ದಾರೆ ಮಂಡೂರಿನ ನಾರಾಯಣಮೂರ್ತಿ ಎಂಬುವರು ಶಿಡ್ಲಘಟ್ಟ ತಾಲೂಕಿನಲ್ಲಿ ಜಮೀನು ಖರೀದಿಸಿದ್ದು ಅದನ್ನು ಖಾತೆ ಮಾಡಿಕೊಡಲು ರಾಜಸ್ವ ನಿರೀಕ್ಷಕ ವಿಶ್ವನಾಥ್ 7.5 ಲಕ್ಷ ರೂಗಳ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ ಈ ಸಂಬಂಧ ನಾರಾಯಣಮೂರ್ತಿ ಅವರು ಎಸಿಬಿಯಲ್ಲಿ ದೂರು ದಾಖಲಿಸಿದ್ದರು.
ದೂರು ದಾಖಲಿಸಿಕೊಂಡ ಎಸಿಬಿ ಪೋಲಿಸರು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಭ್ರಷ್ಟಚಾರ ನಿಗ್ರಹದಳದ ಡಿವೈಎಸ್ಪಿ ಡಿ.ಗೋಪಾಲ್ ಜೋಗಿನ್ ಅವರ ನೇತೃತ್ವದಲ್ಲಿ ದಾಳಿ ನಡೆಸಿ ನಗರದ ಹೊರವಲಯದ ಕಲ್ಯಾಣಮಂಟಪವೊಂದರ ಬಳಿ ನಾರಾಯಣಮೂರ್ತಿ ಅವರಿಂದ ಖಾತೆ ಮಾಡಿಕೊಡಲು 1 ಲಕ್ಷ ರೂಗಳು ಸ್ವೀಕರಿಸುವ ವೇಳೆಯಲ್ಲಿ ರಾಜಸ್ವ ನಿರೀಕ್ಷಕ-ಗ್ರಾಮ ಲೆಕ್ಕಾಧಿಕಾರಿ ಸಿಕ್ಕಿಬಿದ್ದಿದ್ದಾರೆ ಎಂದು ಎಸಿಬಿ ಡಿವೈಎಸ್ಪಿ ತಿಳಿಸಿದ್ದಾರೆ.
ಲಂಚ ಸ್ವೀಕರಿಸುವ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜಸ್ವ ನಿರೀಕ್ಷಕ ಹಾಗೂ ಗ್ರಾಮ ಲೆಕ್ಕಾಧಿಕಾರಿಯನ್ನು ವಶಕ್ಕೆ ಪಡೆದುಕೊಂಡಿರುವ ಎಸಿಬಿ ಪೋಲಿಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.
ವರದಿ: ಎಂ.ಎ.ತಮೀಮ್ ಪಾಷ ಶಿಡ್ಲಘಟ್ಟ
ವರದಿಗಾರರು, ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.