ವಿಟ್ಲ(ವಿಶ್ವ ಕನ್ನಡಿಗ ನ್ಯೂಸ್): ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಡಿ.ವೈ.ಎಫ್.ಐ ವಿಟ್ಲ ವಲಯ ಸಮಿತಿ ವತಿಯಿಂದ ಜೂ.5ರಂದು ಗಿಡಗಳ ವಿತರಣಾ ಕಾರ್ಯಕ್ರಮ ವಿಟ್ಲ ಕಚೇರಿಯಲ್ಲಿ ನಡೆಯಿತು.
ಕಾರ್ಯಕ್ರಮ ಉದ್ಘಾಟಿಸಿ ಪ್ರಗತಿಪರ ಬರಹಗಾರರಾದ ಅಬ್ದುಲ್ ಖಾದರ್ ಕುಕ್ಕಾಜೆ ಮಾತನಾಡಿ ಇಂದು ಪರಿಸರ ಸಂರಕ್ಷಣೆ ಮಾಡುವುದು ನಮ್ಮೆಲ್ಲರ ಕರ್ತವ್ಯ ವಾಗಿದೆ, ಗಿಡಗಳನ್ನು ನೆಡುವ ಮೂಲಕ ಮುಂದಿನ ತಲೆಮಾರಿಗೆ ನೈರ್ಮಲ್ಯ ಯುತವಾದ ಪರಿಸರವನ್ನು ನಿರ್ಮಿಸಿ ಕೊಡಲು ನಾವು ಮುಂದಾಗಬೇಕೆಂದು ಕರೆ ನೀಡಿದರು.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿ ಗಳಾಗಿ ಕಾರ್ಮಿಕ ಮುಖಂಡರಾದ ರಾಮಣ್ಣ ವಿಟ್ಲ, ವೆಲ್ ಪೇರ್ ಪಾರ್ಟಿ ಆಫ್ ಇಂಡಿಯಾದ ಪುತ್ತೂರು ವಲಯ ಕಾರ್ಯದರ್ಶಿ ಇಶಾಕ್, ಡಿ.ವೈ.ಎಫ್.ಐ ವಿಟ್ಲ ವಲಯ ಸಮಿತಿ ಮಾರ್ಗದರ್ಶಕ ಮಹಮ್ಮದ್ ಇಕ್ಬಾಲ್ ಹಳೆಮನೆ, ತಾಲೂಕು ಕಾರ್ಯದರ್ಶಿ ನ್ಯಾಯವಾದಿ ತುಳಸೀದಾಸ್ ವಿಟ್ಲ, ಸಮಿತಿ ಮುಖಂಡರಾದ ಇರ್ಪಾನ್, ಒಕ್ಕೆತ್ತೂರು, ಸಹೀದ್ ಶೈನ್, ಸಲೀಂ ಮಲಿಕ್, ತಮೀಮ್.ಎಂ.ಕೆ ಸಹಿತ ಮತ್ತಿತರರು ಉಪಸ್ಥಿತರಿದ್ದರು. ವಿಟ್ಲ ವಲಯ ಕಾರ್ಯದರ್ಶಿ ಜಮೀಲ್.ಎಂ.ಕೆ ಸ್ವಾಗತಿಸಿ, ಅಧ್ಯಕ್ಷ ನುಜುಂ ಅಳಿಕೆ ವಂದಿಸಿದರು.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.