(www.vknews.com) : ಶಕ್ತಿ ವಸತಿ ಶಾಲೆ ಶಕ್ತಿನಗರ ಮಂಗಳೂರು ಇಲ್ಲಿನ ವಿದ್ಯಾರ್ಥಿಗಳಿಗೆ ಪರಿಸರ ದಿನಾಚರಣೆಯ ಅಂಗವಾಗಿ ಆನ್ಲೈನ್ ಚಿತ್ರಕಲಾ ಸಧ್ರ್ಪೆಯು ಏರ್ಪಟ್ಟಿತ್ತು. ಸ್ಪರ್ಧೆಯು ಎರಡು ವಿಭಾಗದಲ್ಲಿ ನಡೆದಿದ್ದು 1-5 ತರಗತಿಯ ವಿದ್ಯಾರ್ಥಿಗಳಿಗೆ ಲಾಕ್ಡೌನ್ನ ಸದ್ಬಳಕೆ ಎಂಬ ವಿಷಯ ಮತ್ತು 6-9 ನೇ ತರಗತಿಯ ವಿದ್ಯಾರ್ಥಿಗಳಿಗೆ ಲಾಕ್ಡೌನ್ನ ಮೊದಲು ಮತ್ತು ನಂತರ ಎಂಬ ವಿಷಯದ ಮೇಲೆ ಸ್ಪರ್ಧೆಯನ್ನು ನಡೆಸಲಾಯಿತು. ವಿದ್ಯಾರ್ಥಿಗಳು ಬಹಳ ಕಲಾತ್ಮಕವಾಗಿ ತಮ್ಮ ಚಿಂತನೆಯನ್ನು ಚಿತ್ರದ ಮೂಲಕ ಮೂಡಿಸಿದ್ದಾರೆ.
ಕಳೆದ ಒಂದು ತಿಂಗಳಿಂದ ಆನ್ಲೈನ್ ತರಗತಿಯಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುತ್ತಿದ್ದ 1-9 ನೇ ತರಗತಿಯ ವಿದ್ಯಾರ್ಥಿಗಳು ಈ ಆನ್ಲೈನ್ ಚಿತ್ರಕಲಾ ಸ್ಪರ್ಧೆಯಲ್ಲೂ ಅಷ್ಟೇ ಉತ್ಸಾಹದಿಂದ ಭಾಗವಹಿಸಿದ್ದಾರೆ. ಈ ಕಾರ್ಯಕ್ರಮದ ಆಯೋಜನೆಯನ್ನು ಚಿತ್ರಕಲಾ ಅಧ್ಯಾಪಕರಾದ ಪೂರ್ಣೇಶ್ ಮಾಡಿದರು ಎಂದು ಶಾಲೆಯ ಪ್ರಾಂಶುಪಾಲೆ ಶ್ರೀಮತಿ ವಿದ್ಯಾ ಕಾಮತ್ ಜಿ. ತಿಳಿಸಿದ್ದಾರೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.