ಶಿಡ್ಲಘಟ್ಟ,(ವಿಶ್ವಕನ್ನಡಿಗ ನ್ಯೂಸ್) : ತಾಲೂಕಿನ ತಾತಹಳ್ಳಿಯ ಸಮೀಪ ನಡೆದ ಜಿಲ್ಲಾ ಮಟ್ಟದ ಪರಿಸರ ದಿನಾಚರಣೆಯ ಅವ್ಯವಸ್ಥೆ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಡಾ.ಕೆ.ಸುಧಾಕರ್ ಅವರು ಸರ್ವಾಧಿಕಾರಿ ಧೋರಣೆ ಅನುಸರಿಸಿದ್ದಾರೆ ಎಂದು ಕ್ಷೇತ್ರದ ಶಾಸಕ ವಿ.ಮುನಿಯಪ್ಪ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಬೆನ್ನಲ್ಲೆ ಇದೀಗ ತಾಲೂಕು ಪಂಚಾಯಿತಿ ಅಧ್ಯಕ್ಷ ರಾಜಶೇಖರ್ ಸಂಘಟಕರ ವಿರುಧ್ಧ ಆಕ್ರೋಶ ವ್ಯಕ್ತಪಡಿಸಿ ತಮಗೂ ಸಹ ಅವಮಾನಗೊಳಿಸಲಾಗಿದೆ ಎಂದು ಕಿಡಿಕಾರಿದ್ದಾರೆ.
ನಗರದ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಸುಧ್ಧಿಗಾರರೊಂದಿಗೆ ಮಾತನಾಡಿದ ಅವರು ಶಿಡ್ಲಘಟ್ಟ ತಾಲೂಕಿನ ತಾತಹಳ್ಳಿ ಸಮೀಪ ಜಿಲ್ಲಾ ಮಟ್ಟದ ಪರಿಸರ ದಿನಾಚರಣೆಯನ್ನು ಆಚರಿಸಲು ಸಂಪೂರ್ಣವಾಗಿ ಸಹಕಾರ ನೀಡಿದ ನಮಗೆ ಕಾರ್ಯಕ್ರಮದಲ್ಲಿ ಭಾಗವಹಿಸಲು ಪೋಲಿಸರು ತಡೆಯೊಡ್ಡಿದರು ತಾಲೂಕು ಪಂಚಾಯಿತಿ ಅಧ್ಯಕ್ಷರಾದ ನನ್ನೊಂದಿಗೆ ಪೋಲಿಸರು ನಡೆದುಕೊಂಡ ರೀತಿಯಿಂದ ಬೇಸರಗೊಂಡಿದೆ ಜೊತೆಗೆ ರೈತ ಮತ್ತು ಪತ್ರಕರ್ತರ ಸಂಘದ ಸದಸ್ಯರನ್ನು ತಡೆಯೊಡ್ಡಿರುವುದನ್ನು ಗಂಭೀರವಾಗಿ ಪರಿಗಣಿಸಿ ಕಾರ್ಯಕ್ರಮದ ಆಯೋಜಕರಿಗೆ ನೋಟಿಸ್ ಜಾರಿಗೊಳಿಸಿ ಅವರಿಂದ ಬರುವ ಮಾಹಿತಿಯನ್ನು ಆಧರಿಸಿ ಮುಂದಿನ ಕ್ರಮ ಜರುಗಿಸಲಾಗುವುದೆಂದು ತಾಪಂ ಅಧ್ಯಕ್ಷ ರಾಜಶೇಖರ್ ಸ್ಪಷ್ಟಪಡಿಸಿದರು.
ಅಂರ್ತಜಲಮಟ್ಟವನ್ನು ವೃಧ್ಧಿಗೊಳಿಸಲು ತಾಲೂಕು ಪಂಚಾಯಿತಿಗೆ ಸೇರಿದ 100 ಎಕರೆ ನೀಲಗಿರಿ ಮರಗಳನ್ನು ತೆರವುಗೊಳಿಸಿ ಅಲ್ಲಿ ವಿವಿಧ ಹಣ್ಣುಗಳ ಗಿಡಗಳನ್ನು ನೆಟ್ಟು ಪೋಷಣೆ ಮಾಡಲು ಹಿಂದಿನ ತಾಲೂಕು ಪಂಚಾಯಿತಿ ಅಧ್ಯಕ್ಷರುಗಳಾದ ಲಕ್ಷ್ಮೀನಾರಾಯಣರೆಡ್ಡಿ ಮತ್ತು ನಾರಾಯಣಸ್ವಾಮಿ ಅವರು ತೀರ್ಮಾನ ಕೈಗೊಂಡಿದ್ದರು ಅದರ ಪ್ರಕಾರ ಮುಂದಿನ ನಾಲ್ಕು ವರ್ಷಗಳ ಅವಧಿಯಲ್ಲಿ 100 ಎಕರೆ ಪ್ರದೇಶದಲ್ಲಿ ಗಿಡ ಮರವಾಗಿ ಬೆಳೆಯುತ್ತದೆ ಜೊತೆಗೆ ಒಂದು ರೀತಿಯ ಪ್ರವಾಸೋದ್ಯಮ ಕೇಂದ್ರವಾಗಿ ಪರಿವರ್ತನೆಯಾಗುತ್ತದೆ ಎಂದರು.
ತಾಲೂಕು ಪಂಚಾಯಿತಿ ಇಓ ಬಿ.ಶಿವಕುಮಾರ್ ಮಾತನಾಡಿ ಮಹಾತ್ಮಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯಡಿ 64.304 ಲಕ್ಷ ರೂಗಳ ವೆಚ್ಚದಲ್ಲಿ ತಾತಹಳ್ಳಿ ಅರಣ್ಯ ಪ್ರದೇಶವನ್ನು ಅಭಿವೃಧ್ಧಿಗೊಳಿಸಲು ಕ್ರಮ ಕೈಗೊಳ್ಳಲಾಗಿದೆ ಆದರೇ ಸಂಘಟನೆಯೊಂದರ ಪದಾಧಿಕಾರಿಗಳು ಯೋಜನೆಯಲ್ಲಿ ಅವ್ಯವಹಾರ ನಡೆದಿದೆ ಎಂದು ಆರೋಪಿಸಿರುವುದು ಸತ್ಯಕ್ಕೆ ದೂರವಾದ ವಿಚಾರವೆಂದು ಸ್ಪಷ್ಟಪಡಿಸಿ ಮಜಿನರೇಗಾ ಯೋಜನೆಯಡಿ ಕಾಮಗಾರಿ ವಿಳಂಭವಾಗಬಹುದೆಂದು ಜೆಸಿಬಿಯಿಂದ ಕೆಲಸ ಮಾಡಿರುವುದು ಸತ್ಯ ಆದರೇ ಮಜಿನರೇಗಾ ಯೋಜನೆಯ ಮೂಲಕ ಕೂಲಿ ಕಾರ್ಮಿಕರ ಮೂಲಕ ಕೆಲಸವನ್ನು ನಿರ್ವಹಿಸಿದ್ದೇವೆ ಜೆಸಿಬಿ ಕೆಲಸಕ್ಕೆ ತಾಲೂಕು ಪಂಚಾಯಿತಿಯ ಅನುದಾನವನ್ನು ಬಳಕೆ ಮಾಡಿಕೊಂಡು ಹಣ ಪಾವತಿಸಿದ್ದೇವೆ ಮಜಿನರೇಗಾ ಯೋಜನೆಯಡಿ 23 ಲಕ್ಷ ಹಾಗೂ ತಾಲೂಕು ಪಂಚಾಯಿತಿಯಿಂದ 17 ಲಕ್ಷ ರೂಗಳು ಸೇರಿದಂತೆ 40 ಲಕ್ಷ ರೂಗಳ ಕಾಮಗಾರಿ ಪ್ರಗತಿಯಲ್ಲಿದೆ ಎಂದು ಸ್ಪಷ್ಟಪಡಿಸಿದರು.
ಜಿಲ್ಲೆಯಲ್ಲಿ ತಾತಹಳ್ಳಿ ಅರಣ್ಯ ಪ್ರದೇಶವನ್ನು ಮಾದರಿಯಾಗಿ ಪರಿವರ್ತಿಸಲು ಪ್ರಾಮಾಣಿಕವಾಗಿ ಪ್ರಯತ್ನ ಮಾಡಲಾಗಿದೆ ಆದರೇ ಕೆಲವರು ಮಜಿನರೇಗಾ ಯೋಜನೆಯಡಿ ಅವ್ಯವಹಾರ ನಡೆದಿದೆ ಕಾಯ್ದೆಯ ನಿಯಮಗಳನ್ನು ಉಲಂಘಿಸಲಾಗಿದೆ ಎಂದು ಅಪಪ್ರಚಾರ ಮಾಡುತ್ತಿದ್ದಾರೆ ಜೊತೆಗೆ ಸಾರ್ವಜನಿಕರ ವಲಯದಲ್ಲಿ ಗೊಂದಲದ ವಾತಾವರಣ ಸೃಷ್ಠಿಸುವ ಕೆಲಸ ಮಾಡುತ್ತಿದ್ದಾರೆ ಎಲ್ಲವೂ ಪಾರದರ್ಶಕವಾಗಿ ಕೆಲಸವನ್ನು ಮಾಡುತ್ತಿದ್ದೇವೆ ಯಾರು ಬೇಕಾದರು ಆನ್ಲೈನ್ ಮೂಲಕ ನೋಡಿಕೊಳ್ಳಬಹುದೆಂದರು.
ಮಜಿನರೇಗಾ ಯೋಜನೆಯ ಸಹಾಯಕ ನಿರ್ದೇಶಕ ಚಂದ್ರಪ್ಪ ಮಾತನಾಡಿ ತಾಲೂಕಿನಲ್ಲಿ ಮಜಿನರೇಗಾ ಯೋಜನೆಯಡಿ ಬದು ನಿರ್ಮಾಣ ಅಭಿಯಾನವನ್ನು ಆರಂಭಿಸಲಾಗಿದ್ದು ರೈತರು ಈ ಯೋಜನೆಯನ್ನು ಸದುಪಯೋಗ ಮಾಡಿಕೊಳ್ಳಬೇಕೆಂದು ಮನವಿ ಮಾಡಿದರು.
ವರದಿ: ಎಂ.ಎ.ತಮೀಮ್ ಪಾಷ ಶಿಡ್ಲಘಟ್ಟ
ವರದಿಗಾರರು, ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.