(www.vknews.com) : ಪ್ರತಿ ವರ್ಷ ಜೂ. 14ರಂದು ವಿಶ್ವದೆಲ್ಲೆಡೆ ‘ವಿಶ್ವ ರಕ್ತದಾನಿಗಳ ದಿನವನ್ನು’ ಆಚರಿಸಲಾಗುತ್ತದೆ. 2004ರಲ್ಲಿ ಚಾಲ್ತಿಗೆ ಬಂದ ಈ ದಿನ ರಕ್ತ, ರಕ್ತದ ಉತ್ಪನ್ನಗಳu ಅಗತ್ಯದ ಕುರಿತು ಜಾಗೃತಿ ಮೂಡಿಸುವುದು, ರಕ್ತ ದಾನಿಗಳಿಗೆ ಕೃತಜ್ಞತೆ ಸಲ್ಲಿಸುವ ಜತಗೆ, ಅಗತ್ಯವಿರುವ ರೋಗಿಗಳಿಗೆ ನಿರಂತರ ರಕ್ತದಾನ, ಅದರ ಸುರಕ್ಷತೆ ಮತ್ತು ಎಲ್ಲೆಡೆ ರಕ್ತ ಲಭ್ಯತೆ ಇರುವಂತೆ ನೋಡಿಕೊಳ್ಳವುದು ವಿಶ್ವ ರಕ್ತ ದಾನಿಗಳ ದಿನಾಚರಣೆಯ ಉದ್ದೇಶವಾಗಿದೆ. ಇದರೊಂದಿಗೆ ಸ್ವಯಂಪ್ರೇರಿತರಾಗಿ ಜೀವ ಉಳಿಸುವ ಉಡುಗೊರೆ ರಕ್ತವನ್ನು ದಾನ ಮಾಡುವ ವ್ಯಕ್ತಿಗಳಿಗೆ ಧನ್ಯವಾದ ಈ ದಿನ ತಿಳಿಸಲಾಗುತ್ತದೆ.
ರಕ್ತಕ್ಕೆ ಪರ್ಯಾಯ ವಸ್ತುವಿಲ್ಲ. ವಿಜ್ಞಾನ ಎಷ್ಟೇ ಮುಂದುವರಿದರೂ ರಕ್ತಕ್ಕೆ ಬದಲಿ ಸಂಯೋಜನೆಯನ್ನು ನಿರ್ಮಿಸಲು ಸಾಧ್ಯವಿಲ್ಲ. ಅಂತೆಯೇ ಕೃತಕ ರಕ್ತವನ್ನು ಸೃಷ್ಟಿಸಲೂ ಸಾಧ್ಯವಿಲ್ಲ.
ಮನಷ್ಯನ ದೇಹವಿಡೀ ಸಂಚರಿಸಿ, ಜೀವವನ್ನೇ ಹಿಡಿಕೊಂಡಿರುವ ಕೆಂಪು ವರ್ಣದ ದ್ರವ ರಕ್ತ, ಆರೋಗ್ಯವಂತನ ದೇಹದಲ್ಲಿ ಸುಮಾರು 6 ಲೀಟರ್ನಷ್ಟು ರಕ್ತವಿದ್ದು, ರಕ್ತದಾನದಲ್ಲಿ ಕೇವಲ 350 ಮಿ.ಲೀ ರಕ್ತವನ್ನು ಮಾತ್ರ ಸ್ವೀಕರಿಸಲಾಗುತ್ತದೆ. ಇದರಿಂದ ದಾನಿಗಳಿಗೆ ಯಾವುದೇ ಅಪಾಯವಿಲ್ಲ.
ಅಪಘಾತ, ಕ್ಯಾನ್ಸರ್, ಹೃದಯಸಂಬಂಧಿ ಸಮಸ್ಯೆಗಳು, ಹೆರಿಗೆ ಸಂಬಂಧಿ ಚಿಕಿತ್ಸೆಯ ವೇಳೆ ವ್ಯಾಪಕವಾಗಿ ರಕ್ತ ಬೇಕಾಗುತ್ತದೆ. ಆದರೆ, ಭಾರತವೂ ಸೇರಿದಂತೆ ಇಡೀ ವಿಶ್ವದಾದ್ಯಂತ ಬೇಡಿಕೆಗೆ ತಕ್ಕಂತೆ ರಕ್ತದ ಪೂರೈಕೆಯಿಲ್ಲ. ಹೀಗಾಗಿ ಬದುಕುವ ಎಲ್ಲ ಅವಕಾಶಗಳಿದ್ದರೂ ಎಷ್ಟೋ ಜೀವಗಳು ರಕ್ತದ ಕೊರತೆಯಿಂದಾಗಿ ಆಸ್ಪತ್ರೆಗಳಲ್ಲಿಅಸು ನೀಗಿವೆ. ಈ ಕಾರಣದಿಂದಲೇ ಇಂದಿನ ವಿಶ್ವ ರಕ್ತದಾನಿಗಳ ದಿನಕ್ಕೆ ಹೆಚ್ಚೆನ ಮಹತ್ವ ಕೊಟ್ಟು ಸಾರ್ವಜನಿಕ ವಲಯಗಳ ಸಂಘ,ಸಂಸ್ಥೆಗಳು ಅಲ್ಲಲ್ಲಿ ರಕ್ತದಾನ ಶಿಬಿರಗಳನ್ನು ನಡುಸುತ್ತಿವೆ. ರಕ್ತದಾನ ಮಾಡಲು ದುಡ್ಡು ಬೇಕಾಗಿಲ್ಲ. ಅದಕ್ಕೆ ಬೇಕಾಗಿರುವುದು ಒಂದು ಜೀವಕ್ಕೆ ಮಿಡಿಯುವ ದೊಡ್ಡ ಮನಸ್ಸಷ್ಟೆ. “ರಕ್ತದಾನಿಗಳಿಗೆ ಈ ದಿನ ಶುಭಾಶಯಗಳು”
✍ ಅದ್ದಿ ಬೊಳ್ಳೂರು (ಸಾಮಾಜಿಕ ಕಾರ್ಯಕರ್ತರು, ಹಳೆಯಂಗಡಿ)
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.