ವಿಟ್ಲ (www.vknews.com) : ಬಂಟ್ವಾಳ ವಿಧಾನ ಸಭಾ ಕ್ಷೇತ್ರದ ಮಾಜಿ ಶಾಸಕರು , ಮಾಜಿ ಸಚಿವರಾದ ಶ್ರೀ ಬಿ ರಮಾನಾಥ್ ರೈ ಅವರ ವಿರುದ್ದ ಸಾಮಾಜಿಕ ಜಾಲತಾಣದಲ್ಲಿ ನಿಂದಿಸಿ ಪೆಸ್ಬುಕ್ ನಲ್ಲಿ ಪೋಸ್ಟ್ ಮಾಡಿರುವ ಉಮೇಶ್ ಅಚಾರ್ಯ ಎಂಬವರ ವಿರುದ್ಧ ಪೋಲಿಸ್ ಇಲಾಖೆ ಸೂಕ್ತ ತನಿಖೆ ನಡೆಸಬೇಕಾಗಿದೆ ಎಂದು ಜಿಲ್ಲಾ ಕಾಂಗ್ರೆಸ್ ಮಾಧ್ಯಮ ವಕ್ತಾರ ಜಿ.ಎ ಶಂಸುದ್ದೀನ್ ಅಜ್ಜಿನಡ್ಕ ಆಗ್ರಹಿಸಿದ್ದಾರೆ.
ದ.ಕ.ಜಿಲ್ಲೆಯ ಜಾತ್ಯತೀತ, ಸರಳ ಸಜ್ಜನ, ರಾಜಕಾರಣಿಯಾಗಿ ಜಿಲ್ಲೆಯ ಅಭಿವೃದ್ಧಿಗೆ ರೈ ಅವರ ಕೊಡುಗೆ ಅಪಾರ ಅನನ್ಯವಾಗಿದೆ. ಅವರು ಸಚಿವರು, ಶಾಸಕರಾಗಿದ್ದ ಸಂದರ್ಭದಲ್ಲಿ ಇಡೀ ದ.ಕ.ಜಿಲ್ಲೆಯ ಸರ್ವತೋಮುಖ ಅಭಿವೃದ್ಧಿಗೆ ಪ್ರಮುಖ ಕಾರಣಕರ್ತರಾಗಿರುವ ಧೀಮಂತ ನಾಯಕ ರೈ ಅವರು ಎಂದರೆ ತಪ್ಪಾಗಲಾರದು. ಇಂತಹ ಸಜ್ಜನ ರಾಜಕಾರಣಿ ರೈ ಅವರ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಮಾಡಿರುವ ಅವಹೇಳನ ವರದಿ ಅತ್ಯಂತ ಖಂಡನೀಯವಾಗಿದೆ ಎಂದರು
ಸಾಮಾಜಿಕ ಜಾಲತಾಣದಲ್ಲಿ ಮಾಜಿ ಸಚಿವ ರೈ ವಿರುದ್ಧ ತೇಜೋವಧನೆ ಮಾಡುವ ಮೂಲಕ ಅವರ ವರ್ಚಸ್ಸಿಗೆ ದಕ್ಕೆ ತರುವ ಕೆಲಸವನ್ನು ಮಾಡಿದ ಉಮೇಶ್ ಅಚಾರ್ಯ ಎಂಬವರನ್ನು ಪೋಲಿಸ್ ಇಲಾಖೆ ಬಂದಿಸುವ ಮೂಲಕ ಸೂಕ್ತ ತನಿಖೆ ನಡೆಸಿ ಆತನ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಕಾಂಗ್ರೆಸ್ ಮಾಧ್ಯಮ ವಿಭಾಗದ ವಕ್ತಾರ ಜಿ.ಎ ಶಂಸುದ್ದೀನ್ ಅವರು ಆಗ್ರಹಿಸಿದ್ದಾರೆ.
ಈಗಾಗಲೇ ಪುತ್ತೂರು ವಿಧಾನ ಸಭಾ ಕ್ಷೇತ್ರದ ಕಾಂಗ್ರೆಸ್ ಸಾಮಾಜಿಕ ಜಾಲತಾಣದ ಮುಖಾಂತರ ಪೋಲಿಸ್ ಇಲಾಖೆಗೆ ನೀಡಿರುವ ದೂರು ಶಾಘ್ಲನೀಯವಾಗಿದೆ ಎಂದರು
ರಮಾನಾಥ್ ರೈ ಅವರ ಬಗ್ಗೆ ಪೋಸ್ಟ್ ಮಾಡಿದಾತನ ವಿರುದ್ದ ಸೂಕ್ತ ತನಿಖೆ ನಡೆಸಿ ಸೂಕ್ತ ಕಾನೂನು ಕ್ರಮ ಜರುಗಿಸಬೇಕು ಎಂದು ಮಾಧ್ಯಮ ಹೇಳಿಕೆ ಮುಖಾಂತರ ಆಗ್ರಹ ವ್ಯಕ್ತಪಡಿಸಿದ್ದಾರೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.