ಅಮೀನಗಡ (www.vknews.com) : ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಅಡಿಯಲ್ಲಿ ಬರುವ ಮೊರಾರ್ಜಿ, ಕಿತ್ತೂರು ರಾಣಿ ಚೆನ್ನಮ್ಮ ಹಾಗೂ ಅಂಬೇಡ್ಕರ್ ವಸತಿ ಶಾಲೆಗಳಿಗೆ ಪ್ರವೇಶ ಬಯಸುವ ವಿದ್ಯಾರ್ಥಿಗಳಲ್ಲಿ ಸ್ಥಳೀಯ ಮಟ್ಟದ ವಿದ್ಯಾರ್ಥಿಗಳಿಗೆ ಶೇ.25 ರಷ್ಟು ಆದ್ಯತೆ ನೀಡಲಾಗುವುದು ಎಂದು ಉಪಮುಖ್ಯಮಂತ್ರಿ ಗೋವಿಂದ ಎಂ ಕಾರಜೋಳ ಹೇಳಿದರು.
ಅವರು ಸಮೀಪದ ಸೂಳೇಬಾವಿಯ ತಳ್ಳಿಕ್ರಾಸ್ನಲ್ಲಿ ಸಮಾಜ ಕಲ್ಯಾಣ ಇಲಾಖೆ ಹಾಗೂ ಕ್ರೈಸ್ ಸಂಸ್ಥೆಯಿಂದ ಹಮ್ಮಿಕೊಂಡಿದ್ದ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯ ಕಟ್ಟಡದ ಶಂಕು ಸ್ಥಾಪನೆ ನೆರವೇರಿಸಿ ಮಾತನಾಡಿದರು. ವಸತಿ ಶಾಲೆಗಳು ಬಡ ಪ್ರತಿಭಾವಂತ ವಿದ್ಯಾಥಿಗಳಿಗೆ ತುಂಬಾ ಅನುಕೂಲವಾಗಿವೆ. ವಸತಿ ಶಾಲೆಗಳ ಫಲಿತಾಂಶ ಶೇ,ನೂರರಷ್ಟಿದ್ದು ಸೂಳೇಬಾವಿಯಲ್ಲಿ 27ಕೋಟಿ ವೆಚ್ಚದಲ್ಲಿ ಉತ್ತಮ ಸುಸಜ್ಜಿತ ಶಾಲೆ ನಿರ್ಮಾಣವಾಗಲಿದೆ. ಸ್ವಂತ ಕಟ್ಟಡವಿಲ್ಲದೆ ಮಕ್ಕಳಿಗೆ ಅನನುಕೂಲವಾಗಿದ್ದು ಇನ್ನು ಮುಂದೆ ಸಮಸ್ಯೆ ಬಗೆಹರಿಯಲಿದೆ ಎಂದರು.
ಶಾಸಕ ದೊಡ್ಡನಗೌಡ ಪಾಟೀಲ ಅಧ್ಯಕ್ಷತೆ ವಹಿಸಿದ್ದರು. ಶಾಸಕ ಸಿದ್ದು ಸವದಿ, ಗ್ರಾಮ ಪಂಚಾಯಿತಿ ಅಧ್ಯಕ್ಷ ನಾಗೇಂದ್ರ ನಿರಂಜನ, ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಅನಿಲ ನಾಡಗೌಡ ವಿಜಯ ಮಹಾಂತೇಶ ಬ್ಯಾಂಕ್ ನಿರ್ದೇಶಕ ರಾಜು ನಾಡಗೌಡ, ಮುಖಂಡ ನಾಗೇಶ ಗಂಜೀಹಾಳ, ಸಂಗಣ್ಣ ನಾಡಗೌಡ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಜಗದೀಶ ಹೆಬ್ಬಳ್ಳಿ, ತಹಶೀಲ್ದಾರ್ ಬಸವರಾಜ ನಾಗರಾಳ, ಇಳಕಲ್ಲ ತಹಶೀಲ್ದಾರ್ ವೇದವ್ಯಾಸ ಮುತಾಲಿಕ, ತಾಲ್ಲೂಕು ಸಹಾಯಕ ಉಪನಿರ್ದೇಶಕ ಸೈರಾಬಾನು ನದಾಫ, ಮುಖ್ಯ ಅಭಿಯಂತರ ಸುನೀಲ, ಚೇತನ.ಜಿ.ಎಂ. ಪ್ರಾಂಶುಪಾಲ ಮಹಾನಂದ.ಕೆ, ರವಿ ಇದ್ದಲಗಿ ಉಪಸ್ಥಿತರಿದ್ದರು.
ಕುಡಿಯುವ ನೀರು ಹಾಗೂ ಗ್ರಂಥಾಲಯ ಮಂಜೂರಾತಿಗೆ ಮನವಿ: ಸೂಳೇಬಾವಿ ಗ್ರಾಮವು 15 ಸಾವಿರ ಜನಸಂಖ್ಯೆ ಹೊಂದಿದ್ದು ಕುಡಿಯುವ ನೀರಿಗೆ ಸುಸಜ್ಜಿತ ವ್ಯವಸ್ಥೆ ಮಾಡಲು ಐದು ಲಕ್ಷ ನೀರು ಸಂಗ್ರಹಿಸುವ ಸಾಮಥ್ಯವುಳ ಟ್ಯಾಂಕ್ ನಿರ್ಮಾಣ ಮಾಡುವಂತೆ ಕೋರಿ ಗ್ರಾಮಸ್ಥರು ಗೋವಿಂದ ಕಾರಜೋಳ ಅವರಿಗೆ ಮನವಿ ಸಲ್ಲಿಸಿದರು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷ ನಾಗೇಂದ್ರ ನಿರಂಜನ ಮಾತನಾಡಿ ಕುಡಿಯುವ ನೀರಿನ ಜೊತೆಗೆ ಗ್ರಾಮದಲ್ಲಿ ಒಂದು ಸುಸಜ್ಜಿತ ಗ್ರಂಥಾಲಯ ಮಂಜೂರಿ ಮಾಡುವಂತೆ ಸಚಿವರಲ್ಲಿ ಮನವಿ ಮಾಡಿಕೊಂಡರು. ಮುಖಂಡ ನಾಗೇಶ ಗಂಜೀಹಾಳ ಹಾಗೂ ಗ್ರಾಮ ಪಂಚಾಯಿತಿ ಸದಸ್ಯರು ಇದ್ದರು.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.