ಮಂಗಳೂರು (www.vknews.com) : ಕೊರೋನಾ ವೈರಸ್ ಬಾಧಿತರಾಗಿ ಮಂಗಳೂರು ನಗರದಲ್ಲಿ ಮೃತ ಹೊಂದಿದ ಎರಡನೇ ಮೃತ ದೇಹದ ದಫನ ಕಾರ್ಯವನ್ನು ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ ಕಾರ್ಯಕರ್ತರು ಯಶಸ್ವಿಯಾಗಿ ನೆರವೇರಿಸಿದರು.
ಜೂನ್ 24 ಮೃತರಾದ ಮಹಿಳೆಯ ದಫನ ಕಾರ್ಯವನ್ನು ರಫೀಕ್ ಉಳ್ಳಾಲರವರ ನೇತೃತ್ವದಲ್ಲಿ ಉಳ್ಳಾಲದ ಮಸೀದಿಯಲ್ಲಿ ನೆರವೇರಿಸಲಾಯಿತು. ಉಳ್ಳಾಲದ ಸ್ಥಳೀಯ ಯುವಕರು ಸ್ವಯಂಪ್ರೇರಿತರಾಗಿ ಸಹಕರಿಸಿದ್ದರು.
ಈ ಸಂಧರ್ಭದಲ್ಲಿ ಸ್ಥಳೀಯ ಶಾಸಕರು,ಜನಪ್ರತಿನಿಧಿಗಳು,ಧಾರ್ಮಿಕ ವಿಧ್ವಾ0ಸರು,ಸ್ಥಳೀಯ ಮಸೀದಿಯ ಆಡಳಿತ ಸಮಿತಿಯ ಸದಸ್ಯರು ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.
ಈ ಮೊದಲು ಜೂನ್ 23ರಂದು ಮಂಗಳೂರಿನಲ್ಲಿ ಮೃತರಾದ ವ್ಯಕ್ತಿಯ ದಫನ ಕಾರ್ಯವನ್ನು ಪಿಎಫ್ಐ ಜಿಲ್ಲಾ ಸಮಿತಿ ಸದಸ್ಯ ಮುಝೈರ್ ಕುದ್ರೋಳಿಯವರ ತಂಡ ಮಂಗಳೂರಿನ ಬೋಳಾರದ ಮಸೀದಿಯಲ್ಲಿ ಯಶಸ್ವಿಯಾಗಿ ನೆರವೇರಿಸಿತ್ತು.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡ್ ಪ್ರಕರಣ ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಇತ್ತೀಚೆಗೆ ಪಾಪ್ಯುಲರ್ ಫ್ರಂಟ್ ವತಿಯಿಂದ ಆಯ್ದ 30 ಮಂದಿ ಕಾರ್ಯಕರ್ತರಿಗೆ ಆರೋಗ್ಯ ಇಲಾಖೆಯ ಸಹಕಾರದೊಂದಿಗೆ ಕೋವಿಡ್ ಬಾಧಿತ ಮೃತದೇಹಗಳ ಅಂತ್ಯ ಸಂಸ್ಕಾರದ ಮಾಹಿತಿ ಕಾರ್ಯಾಗಾರವನ್ನು ಮಂಗಳೂರಿನಲ್ಲಿ ಹಮ್ಮಿಕೊಳ್ಳಲಾಗಿತ್ತು.
ವೆನ್ಲಾಕ್ ಆಸ್ಪತ್ರೆಯ ಖ್ಯಾತ ಚರ್ಮ ರೋಗ ತಜ್ಞ ಡಾ.ನವೀನ್ ಕುಮಾರ್ ಅವರಿಂದ ತರಬೇತಿ ನೀಡಲಾಗಿತ್ತು.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.