(www.vknews.com) : ಶ್ರೀ ಆನಂದ್ ಎಸ್ ಜಿಗಜಿನ್ನಿ ರವರು ಭಾರತೀಯ ರೆಡ್ ಕ್ರಾಸ್ ಸಂಸ್ಥೆ, ಕರ್ನಾಟಕ ರಾಜ್ಯ ಶಾಖೆಯ ಖಜಾಂಚಿಗಳಾಗಿ ಸಂಸ್ಥೆಯ ಆಡಳಿತ ಮಂಡಳಿ ಸಭೆಯಲ್ಲಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಕಳೆದ 10 ವರ್ಷಗಳಿಂದ ಭಾರತೀಯ ರೆಡ್ ಕ್ರಾಸ್ ಸಂಸ್ಥೆ, ಕರ್ನಾಟಕ ರಾಜ್ಯ ಶಾಖೆಯ ಆಡಳಿತ ಮಂಡಳಿ ಸದಸ್ಯರಾಗಿ ಮತ್ತು ಬಾಗಲಕೋಟೆ ಜಿಲ್ಲೆಯ ಸಭಾಪತಿಗಳಾಗಿ ರೆಡ್ ಕ್ರಾಸ್ ನಲ್ಲಿ ಸೇವೆಯನ್ನು ಸಲ್ಲಿಸುತ್ತಿದ್ದಾರೆ. ಕಳೆದ ವರ್ಷದ ಉತ್ತರ ಕರ್ನಾಟಕದಲ್ಲಿನ ಪ್ರವಾಹ ಸಂದರ್ಭದಲ್ಲಿ ರೆಡ್ ಕ್ರಾಸ್ ಸ್ವಯಂಸೇವಕರನ್ನು ಒಳಗೊಂಡಂತೆ ಸತತವಾಗಿ 46 ದಿನಗಳ ಸೇವಾ ಕಾರ್ಯಗಳಿಂದ 48 ಹಳ್ಳಿಗಳಲ್ಲಿ 86 ಲಕ್ಷ ಮೌಲ್ಯದ ಸಂಪನ್ಮೂಲಗಳನ್ನು ರಾಜ್ಯದ ವಿವಿಧೆಡೆಗಳಿಂದ ಕ್ರೂಡೀಕರಿಸಿ ಜಿಲ್ಲೆಯಲ್ಲಿ ಉತ್ತಮ ಸೇವೆಯನ್ನು ಮಾಡಿದುರ ಕಾರಣವಾಗಿ ರಾಜ್ಯದ ರಾಜ್ಯಪಾಲರಾದ ಶ್ರೀ ವಜುಭಾಯಿ ವಾಲಾ ರವರಿಂದ ಪ್ರಶಸ್ತಿ ಮತ್ತು ಪ್ರಶಂಸೆಯನ್ನು ಸ್ವೀಕರಿಸಿರುತ್ತಾರೆ.
ಶ್ರೀಯುತರು ಕೋವಿಡ್-19 ಸಂದರ್ಭದಲ್ಲಿಯೂ ಸಹ ಸಮುದಾಯಗಳೊಂದಿಗೆ ಅಹರ್ನಿಶಿ ಶ್ರಮಿಸುತ್ತಿದ್ದಾರೆ ಎಂದು ಶ್ರೀ ಎಸ್. ನಾಗಣ್ಣ ಸಭಾಪತಿಗಳು, ಭಾರತೀಯ ರೆಡ್ ಕ್ರಾಸ್ ಸಂಸ್ಥೆ, ಕರ್ನಾಟಕ ರಾಜ್ಯ ಶಾಖೆ ಇವರು ತಮ್ಮ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.