ಮಂಗಳೂರು(ವಿಶ್ವಕನ್ನಡಿಗ ನ್ಯೂಸ್): ದ.ಕ. ಜಿಲ್ಲಾ ಪೌರರಕ್ಷಣಾ ತಂಡದ ಎಲ್ಲಾ ಮೂವತ್ತು ಮಂದಿ ಕಾರ್ಯಕರ್ತರಿಗೆ ದೇಹದ ರಕ್ಷಣಾ ವ್ಯವಸ್ಥೆಯನ್ನು ವೃದ್ಧಿಸುವ ಅರ್ಸೆನಿಕಮ್ ಅಲ್ಬಮ್-30 ಎಂಬ ಔಷಧಿಯನ್ನು ಉಚಿತವಾಗಿ ವಿತರಿಸಲಾಯಿತು.
ದ.ಕ. ಜಿಲ್ಲಾ ಆಯುಷ್ ಇಲಾಖೆಯಿಂದ ಜಿಲ್ಲೆಯ ಎಲ್ಲಾ ಪೌರರಕ್ಷಣಾ ತಂಡ ಮತ್ತು ಗೃಹರಕ್ಷಕರಿಗೆ ಈ ಔಷಧಿಯನ್ನು ಉಚಿತವಾಗಿ ಪೂರೈಸಲಾಗಿದೆ ಎಂದು ದ.ಕ. ಜಿಲ್ಲಾ ಗೃಹರಕ್ಷಕ ದಳದ ಸಮಾದೇಷ್ಟರಾದ ಮತ್ತು ಪೌರರಕ್ಷಣಾ ತಂಡದ ಮುಖ್ಯಪಾಲಕ ಡಾ: ಮುರಲೀ ಮೋಹನ ಚೂಂತಾರು ತಿಳಿಸಿದ್ದಾರೆ.
ಕೋವಿಡ್-19 ಸಂಕಷ್ಟದ ಸಂದರ್ಭಗಳಲ್ಲಿ ಮುಂಚೂಣಿಯಲ್ಲಿ ನಿಂತು ಜನರ ರಕ್ಷಣೆ ಮಾಡುವ ಗೃಹರಕ್ಷಕರು ಮತ್ತು ಪೌರರಕ್ಷಣಾ ತಂಡದ ಸದಸ್ಯರು ಸಮಾಜವನ್ನು ರಕ್ಷಿಸುವ ಸಂದರ್ಭಗಳಲ್ಲಿ ತಮ್ಮನ್ನು ಕೂಡಾ ರಕ್ಷಿಸಿಕೊಳ್ಳಬೇಕಾದ ಅನಿವಾರ್ಯತೆ ಇದೆ ಮತ್ತು ಕೋವಿಡ್-19 ರೋಗ ಈಗ ಸಮುದಾಯದಲ್ಲಿ ತೀವ್ರವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಸಮಾದೇಷ್ಟರು ತಿಳಿಸಿದ್ದಾರೆ.
ದ.ಕ. ಜಿಲ್ಲಾ ಹೋಮಿಯೋಪತಿ ಸಂಘದ ಅಧ್ಯಕ್ಷರಾದ ಡಾ|| ಪ್ರವೀಣ್ ರೈ ಮತ್ತು ಅವರ ತಂಡದಿಂದ ಈ ಔಷಧಿ ವಿತರಣೆ ಸಾಧ್ಯವಾಗಿದೆ ಎಂದು ಅವರು ತಿಳಿಸಿದ್ದಾರೆ.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.