ಸುಳ್ಯ(ವಿಶ್ವಕನ್ನಡಿಗ ನ್ಯೂಸ್): ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ನೂತನ ಅಧ್ಯಕ್ಷ ರಾದ ಡಿ.ಕೆ ಶಿವಕುಮಾರ್ ಹಾಗೂ ಕಾರ್ಯಾಧ್ಯಕ್ಷರಾದ ಸತೀಶ್ ಜಾರಕಿಹೊಳಿ, ಸಲೀಂ ಅಹಮದ್ ಮತ್ತು ಈಶ್ವರ ಖಂಡ್ರೆ ರವರ ಪದಗ್ರಹಣ ಶಮಾರಂಭದ ಪ್ರತಿಜ್ಞಾ ಕಾರ್ಯಕ್ರಮ ಅರಂತೋಡು ವಲಯ ಕಾಂಗ್ರೆಸ್ ವತಿಯಿಂದ ತೆಕ್ಕಿಲ್ ಸಮುದಾಯ ಭವನದಲ್ಲಿ ನಡೆಯಿತು.
ಕಾರ್ಯಕ್ರಮದ ಅಧ್ಯಕ್ಷ ತೆಯನ್ನು ವಲಯ ಕಾಂಗ್ರೆಸ್ ಅಧ್ಯಕ್ಷ ರಾದ ಜನಾರ್ದನ ಅಡ್ಕಬಳೆ ವಹಿಸಿದರು.ಹಿರಿಯ ಕಾಂಗ್ರೆಸ್ ಮುಖಂಡ ದೀಪ ಬೆಳಗಿಸಿ ಕಾರ್ಯಕ್ರಮವನ್ನು ತೀರ್ಥರಾಮ ಉದ್ಘಾಟಿಸಿದರು.
ಮುಖ್ಯ ಅತಿಥಿಯಾಗಿ ಅರಂತೋಡು ಕ್ಷೇತ್ರದ ಉಸ್ತುವಾರಿ ಗೀತಾ ಕೋಲ್ಚಾರ್,ತೊಡಿಕಾನ ಶ್ರೀ ಮಲ್ಲಿಕಾರ್ಜುನ ದೇವಸ್ಥಾನ ವ್ಯವಸ್ಥಾಪನಾ ಅಧ್ಯಕ್ಷ ಕೇಶವ ಕೊಳಲುಮೂಲೆ,ಅರಂತೋಡು ಗ್ರಾಮ ಪಂಚಾಯತ್ ಮಾಜಿ ಸದಸ್ಯರಾದ ರವಿ ಪೂಜಾರಿ ತೊಡಿಕಾನ, ಇದ್ದೀನ್ ಕುಂಞ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಅಣ್ಣದೊರೆ ಅಡ್ಯಡ್ಕ ಸ್ವಾಗತಿಸಿ, ತಿಮ್ಮಯ್ಯ ವಂದಿಸಿ ತಾಜುದ್ದೀನ್ ನಿರೂಪಣೆಗೈದರು.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.