ಉಡುಪಿ,(ವಿಶ್ವಕನ್ನಡಿಗ ನ್ಯೂಸ್) :ಮೀನು ಹಿಡಿಯಲು ತೆರಳಿದ್ದ ಯುವಕರಿಬ್ಬರು ನೀರಿನಲ್ಲಿ ಮುಳುಗಿ ಸಾವನಪ್ಪಿದ ದಾರುಣ ಘಟನೆ ಬಾರ್ಕೂರಿನಲ್ಲಿ ಇಂದು ಮುಂಜಾನೆ ಸಂಭವಿಸಿದೆ.ಮೃತ ಯುವಕರನ್ನು ಬಾರ್ಕೂರು ಹೊಸಾಳ ಗ್ರಾಮದ ಹರ್ಷ (25) ಮತ್ತು ಕಾರ್ತಿಕ್ (21) ಎಂದು ಗುರುತಿಸಲಾಗಿದೆ. ಘಟನಾ ವಿವರ :ಬಾರ್ಕೂರಿನ ಕಚ್ಚೂರು ಗ್ರಾಮದ ಹಾಲಿಕೋಡಿಯ ಸೀತಾ ನದಿ ಕವಲು ಎಂಬಲ್ಲಿ ಮೀನಿಗೆ ಬಲೆ ಬೀಸುತ್ತಿದ್ದ ಸಂಧರ್ಭ ನೀರಿನಲ್ಲಿ ಮುಳುಗಿ ಸಾವನಪ್ಪಿದ್ದಾರೆ.ಸ್ಥಳೀಯರ ನೆರವಿನಿಂದ ಅಗ್ನಿಶಾಮಕ ದಳದವರಿಂದ ಮೃತದೇಹ ವನ್ನು ಮೇಲಕ್ಕೆತ್ತಲಾಗಿದೆ .ಬ್ರಹ್ಮಾವರ ಪೊಲೀಸ್ ರು ಪ್ರಕರಣ ದಾಖಸಿಕೊಂಡಿದ್ದಾರೆ
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.