ಕುಂದಾಪುರ ,(ವಿಶ್ವ ಕನ್ನಡಿಗ ನ್ಯೂಸ್ ): ತಾಲ್ಲೊಕಿನ ಪಡುಕೋಣೆಯ ಶ್ರೀರಾಮ ದೇವಸ್ಥಾನಕ್ಕೆ ಜು.13ರ ತಡರಾತ್ರಿ ನುಗ್ಗಿದ ಕಳ್ಳರು 1.5 ಲಕ್ಷ ಮೌಲ್ಯದ ಬೆಳ್ಳಿಯ ಪ್ರಭಾವಳಿಯನ್ನು ಕಳವು ಗೈದಿದ್ದಾರೆ.ದೇವಸ್ಥಾನದ ಮುಖ್ಯಧ್ವಾರವನ್ನು ಮುರಿದು ಒಳ ನುಗ್ಗಿದ ಕಳ್ಳರು ಈ ಕೃತ್ಯವೆಸಗಿದ್ದಾರೆ. ಬೆಳಿಗ್ಗೆ ಅರ್ಚಕರು ಪೂಜೆಗೆ ಬಂದಾಗ ಬಾಗಿಲು ಒಡೆದಿರುವುದು ಕಂಡು ಬಂದಿದೆ. ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಗಂಗೊಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.