ಕಾರ್ಕಳ ,(ವಿಶ್ವ ಕನ್ನಡಿಗ ನ್ಯೂಸ್ ): ತಾಲೂಕಿನ ಸುಮಾರು 20 ವರ್ಷಗಳಿಂದ ಶೇಂದಿ ವ್ಯಾಪಾರ ಮಾಡುತಿದ್ದ ವ್ಯಕ್ತಿಯೊಬ್ಬರು ತಾಳೆ ಮರದಲ್ಲಿ ಮೂರ್ಛೆ ಕಳೆದುಕೊಂಡು ಸುಮಾರು ಎರಡು ಗಂಟೆಗಳ ಕಾಲ ಮರದ ದಂಡುಗಳ ನಡುವೆ ಸಿಲುಕಿ ಕೊನೆಗೂ ಪವಾಡಸದೃಶ ರೀತಿಯಲ್ಲಿ ಬದುಕುಳಿದ ಘಟನೆ ತಾಲೂಕಿನ ಬೆಳ್ಮಣ್ ಕಡಂದಲೆಯಲ್ಲಿ ನಡೆದಿದೆ.ಕಡಂದಲೆ ಕಲ್ಲೋಳಿಯ ಸಂತೋಷ್ ಎಂಬಾತ ಎಂದಿನಂತೆ ಬೆಳಿಗ್ಗೆ 6.30ರ ಹೊತ್ತಿಗೆ ತಾಳೆ ಮರವೇರಿದವರು ಯಾವುದೋ ಕಾರಣದಿಂದ ಮೂರ್ಛೆ ತಪ್ಪಿದ್ದಾರೆ ಪರಿಣಾಮ 8.30ರವರೆಗೆ ತಾಳೆ ಮರದ ದಂಡುಗಳ ನಡುವೆ ಸಿಲುಕಿದ್ದರು. ಮರದ ಪಕ್ಕದಲ್ಲೇ ದಾರಿಯಲ್ಲಿ ಹೋಗುವವರು ಇವರನ್ನು ಕಂಡರೂ ಆ ವ್ಯಕ್ತಿಯನ್ನು ರಕ್ಷಿಸುವ ಗೋಜಿಗೆ ಹೋಗಿರಲಿಲ್ಲ,ಆ ಸಂದರ್ಭ ಸಂಕಲಕರಿಯ ಪೊರ್ಲು ಲಂಚ್ ಹೋಮ್ ಮಾಲಕರಾದ ಸುಧಾಕರ್ ಸಾಲ್ಯಾನ್ ಅವರು ಶೇಂದಿ ತರಲು ಎಂದಿನಂತೆ ತಮ್ಮ ಕಾರಿನಲ್ಲಿ ಬಂದಿದ್ದಾರೆ ಆಗ ಜನ ಸೇರಿದ್ದನ್ನು ಕಂಡ ಅವರು ವಿಷಯ ತಿಳಿದು ಕೂಡಲೇ ಆಗ್ನಿಶಾಮಕ ಸಿಬ್ಬಂದಿಗೆ ಕರೆ ಮಾಡಿದ್ದಾರೆ.ನಂತರ ಅವರನ್ನು ಸುರಕ್ಷಿತ ವಾಗಿ ಕೆಳಗೆ ಇಳಿಸಲಾಗಿದೆ .
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.