ಮಲ್ಲಪ್ಪುರಂ (ವಿಶ್ವ ಕನ್ನಡಿಗ ನ್ಯೂಸ್) : ದುಬೈ ನಿಂದ ಕೋಯಿಕ್ಕೋಡ್ ಗೆ ಬರುತ್ತಿದ್ದ ಏರ್ ಇಂಡಿಯಾ ಎಕ್ಸ್ ಪ್ರೆಸ್ ವಿಮಾನ ಕರಿಪುರ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಲ್ಯಾಂಡಿಂಗ್ ವೇಳೆಯಲ್ಲಿ ರನ್ವೇಯಿಂದ ಜಾರಿದೆ.
ವಂದೇ ಭಾರತ್ ಮಿಷನ್ ನಲ್ಲಿ ದುಬಾಯಿಯಿಂದ ಆಗಮಿಸುತ್ತಿದ್ದ ಏರ್ ಇಂಡಿಯಾದ ಐ.ಎಕ್ಸ್.-344 ವಿಮಾನವು ರನ್ ವೇನಲ್ಲಿ ಇಳಿಯುವ ಯತ್ನದಲ್ಲಿ ಪೈಲಟ್ ನಿಯಂತ್ರಣ ತಪ್ಪಿ ಮುಂದಕ್ಕೆ ಜಾರಿ 35 ಅಡಿ ಆಳದ ಕಮರಿಗೆ ಉರುಳಿ ಬಿತ್ತು ಎಂದು ಪ್ರತ್ಯಕ್ಷದರ್ಶಿಗಳು ಮಾಧ್ಯಮಗಳಿಗೆ ತಿಳಿಸಿದ್ದಾರೆ.
ಈ ವಿಮಾನದಲ್ಲಿ ಒಟ್ಟು 180 ಜನರು ಪ್ರಯಾಣಿಸುತ್ತಿದ್ದರು. ಇವರಲ್ಲಿ 174 ಜನ ಪ್ರಯಾಣಿಕರು, 4 ಕ್ಯಾಬಿನ್ ಸಿಬ್ಬಂದಿಗಳು ಮತ್ತು ಇಬ್ಬರು ಪೈಲಟ್ ಗಳು ಸೇರಿದ್ದಾರೆ. ಪ್ರಯಾಣಿಕರಲ್ಲಿ 10 ಜನ ಮಕ್ಕಳೂ ಇದ್ದರು ಎಂದು ಬಲ್ಲ ಮೂಲಗಳಿಂದ ತಿಳಿದುಬಂದಿದೆ.
ಇದೀಗ ಬಂದ ಮಾಹಿತಿ ಪ್ರಕಾರ ಪೈಲಟ್ ಸಹಿತ ಒಟ್ಟು ನಾಲ್ಕು ಮಂದಿ ಈ ದುರ್ಘಟನೆಯಲ್ಲಿ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.