ದೇರಳಕಟ್ಟೆ(ವಿಶ್ವಕನ್ನಡಿಗ ನ್ಯೂಸ್): ಮಂಗಳೂರು ಹರೇಕಳ ಮಾರ್ಗದಲ್ಲಿ ಸಂಚರಿಸುವ ಖಾಸಗಿ ಬಸ್ ನಿರ್ವಾಹಕನ ಮೇಲೆ ದುಷ್ಕರ್ಮಿಯೊಬ್ಬ ನಡೆಸಿದ ಹಲ್ಲೆಯನ್ನು ರಾಣಿ ಅಬ್ಬಕ್ಕ ಬಸ್ಸು ನೌಕರರ ಸಂಘ ಖಂಡಿಸಿದ್ದು ಪೊಲೀಸ್ ಇಲಾಖೆ ಕೂಡಲೇ ಆರೋಪಿಯನ್ನು ಬಂಧಿಸುವಂತೆ ಒತ್ತಾಯಿಸಿದೆ.
ಹರೇಕಳ ಮಾರ್ಗದಲ್ಲಿ ಕಟೀಲ್ ಎಂಬ ಹೆಸರಿನ ಬಸ್ ನಿರ್ವಾಹಕ ಇಕ್ಬಾಲ್ ಎಂಬುವವರ ಮೇಲೆ ಹರೇಕಳ ಪ್ರದೇಶದ ಸಾವುಲ್ ಹಮೀದ್ ಎಂಬಾತ ಹಲ್ಲೆ ನಡೆಸಿ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾನೆ. ಕೊರೊನಾದ ಈ ಸಂಕಷ್ಟದ ಸಮಯದಲ್ಲಿ ಬಸ್ ಚಾಲಕ , ನಿರ್ವಾಹಕರು ತಮ್ಮ ಜೀವಭಯ ಲೆಕ್ಕಿಸದೇ ಕೊರೊನಾ ವಾರಿಯರ್ಸ್ ರೀತಿಯಲ್ಲಿ ಸಾರ್ವಜನಿಕ ಸೇವೆಯಲ್ಲಿ ತೊಡಗಿಸಿಕೊಂಡಿದ್ದಾರೆ. ಇಂತಹ ಸೇವಾ ನಿರತ ನಿರ್ವಾಹಕನ ಮೇಲೆ ಕಿಡಿಗೇಡಿಗಳು ಹಲ್ಲೆ ನಡೆಸಿರುವುದು ಖಂಡನೀಯವಾಗಿದ್ದು ಕೂಡಲೇ ಆರೋಪಿಯನ್ನು ಬಂಧಿಸಿ ಕಠಿಣ ಶಿಕ್ಷೆಗೆ ಗುರಿಪಡಿಸಬೇಕೆಂದು ರಾಣಿ ಅಬ್ಬಕ್ಕ ಬಸ್ಸು ನೌಕರರ ಸಂಘದ ಅಧ್ಯಕ್ಷ ಉಸ್ಮಾನ್ ಅಲ್ತಾಫ್ , ಕಾರ್ಯದರ್ಶಿ ಜಗದೀಶ್ ಪತ್ರಿಕಾ ಹೇಳಿಕೆಯಲ್ಲಿ ಒತ್ತಾಯಿಸಿದ್ದಾರೆ.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.