ಉಪ್ಪಿನಂಗಡಿ(ವಿಶ್ವಕನ್ನಡಿಗ ನ್ಯೂಸ್): ಪಶ್ಚಿಮಘಟ್ಟದಲ್ಲಿ ಸುರಿದ ಭಾರೀ ಮಳೆಯಿಂದ ಉಪ್ಪಿನಂಗಡಿ ನೇತ್ರಾವತಿ ಹಾಗೂ ಕುಮಾರಧಾರ ನದಿಗಳು ತುಂಬಿ ಹರಿಯುತ್ತಿದ್ದು, ಮುಂಜಾಗ್ರತಾ ಕ್ರಮವಾಗಿ ನದಿ ನೀರಿನ ಮಟ್ಟ ವೀಕ್ಷಣೆಗೆ ಇಂದು ಎನ್ಡಿಆರ್ಎಫ್ ಕಮಾಂಡೆಂಟ್ ಗೋಪಾಲ್ಲಾಲ್ ಮೀನಾ ಹಾಗೂ ಸಂಜೀವ ಕುಮಾರ್ ಹಾಗೂ ಗೃಹರಕ್ಷಕದಳದ ಜಿಲ್ಲಾ ಕಮಾಂಡೆಂಟ್ ಡಾ|| ಮುರಲೀ ಮೋಹನ್ ಚೂಂತಾರು ರವರು ಭೇಟಿ ನೀಡಿದರು.
ಈ ಸಂದರ್ಭದಲ್ಲಿ ಅವರು ಮಾತನಾಡಿ ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿಯಲ್ಲಿ ನೇತ್ರಾವತಿ ಮತ್ತು ಕುಮಾರಧಾರ ನದಿ ಸಂಗಮ ಆಗುವ ಸಮಯದಲ್ಲಿ ಬಹಳಷ್ಟು ನೀರು ತುಂಬಿ ಮತ್ತು ಡ್ಯಾಮ್ ಒಡೆಯುವ ಸಾಧ್ಯತೆ ಇರುವುದರಿಂದ ಯಾವುದೇ ರೀತಿಯ ಜೀವ ಹಾನಿಯಾಗದಂತೆ ಹಾಗೂ ಆಸ್ತಿ-ಪಾಸ್ತಿಗಳಿಗೆ ಹಾನಿಯಾಗದಂತೆ ಮುನ್ನೆಚ್ಚರಿಕೆಯಾಗಿ ಜಿಲ್ಲಾಡಳಿತ ವತಿಯಿಂದ ಪುತ್ತೂರು ತಹಸೀಲ್ದಾರ್ರವರ ನೇತೃತ್ವದಲ್ಲಿ ನುರಿತ ಈಜುಗಾರರು ಹಾಗೂ ಗೃಹರಕ್ಷಕ ದಳದ ಪ್ರವಾಹ ರಕ್ಷಣಾ ತಂಡ 24 ಗಂಟೆ ಕಾಯುತ್ತಾ ಯಾವುದೇ ತೊಂದರೆಯಾಗದಂತೆ ಕರ್ತವ್ಯವನ್ನು ನಿಭಾಯಿಸುತ್ತಾರೆ ಎಂದು ನುಡಿದರು.
ಈ ಸಂದರ್ಭದಲ್ಲಿ ಪುತ್ತೂರು ತಹಶೀಲ್ದಾರ್ ನೇತೃತ್ವದ ತಾಲೂಕು ಆಡಳಿತದ ಈಜುಗಾರರು ಹಾಗೂ ಗೃಹರಕ್ಷಕ ದಳದ ಪ್ರವಾಹ ರಕ್ಷಣಾ ತಂಡ ಉಪಸ್ಥಿತರಿದ್ದರು.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.