ಸುಳ್ಯ(ವಿಶ್ವಕನ್ನಡಿಗ ನ್ಯೂಸ್): 74ನೇ ನೇ ವರ್ಷದ ಸ್ವಾತಂತ್ರ್ಯಾಚರಣೆಯನ್ನು ನುಸ್ರತುಲ್ ಇಸ್ಲಾಂ ಎಸೋಸಿಯೇಶನ್ ಎಲಿಮಲೆ ಇದರ ಆಶ್ರಯದಲ್ಲಿ ಎಲಿಮಲೆ ಮಸೀದಿಯ ವಠಾರದಲ್ಲಿ ಆಚರಿಸಲಾಯಿತು.
ಎಲಿಮಲೆ ಜಮಾಅತ್ ಉಪಾಧ್ಯಕ್ಷರಾದ ಅಬ್ದುಲ್ ಕಾದರ್ ಪಾಣಾಜೆ ಯವರು ದ್ವಜಾರೋಹಣಗೈದರು ನೂರುಲ್ ಹುದಾ ಮದ್ರಸ ಮುಖ್ಯೋಪಾಧ್ಯಾಯರಾದ ಮಹಮೂದ್ ಸಖಾಫಿಯವರು ಸ್ವಾತಂತ್ರ್ಯ ಸಂಗ್ರಾಮದಲ್ಲಿಮಡಿದವರನ್ನು ಸ್ಮರಣಗೈದು ತ್ಯಾಗ ಬಲಿದಾನಗಳ ಮೂಲಕ ಸ್ವಾತಂತ್ರ್ಯ ತಂದುಕೊಡಲು ದೇಶಕ್ಕಾಗಿ ತಮ್ಮನ್ನು ಸಮರ್ಪಿಸಿದವರಿಗಾಗಿ ವಿಶೇಷ ಪ್ರಾರ್ಥನೆ ನೆರವೇರಿಸಿದರು.
ಜಮಾ ಅತಿಗೊಳಪಟ್ಟ ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು. ನುಸ್ರತ್ ಕಾರ್ಯದರ್ಶಿ ಸೂಫಿ ಎಲಿಮಲೆ ಕಾರ್ಯಕ್ರಮ ನಿರ್ವಹಿಸಿದರು ರಾಷ್ಟ್ರ ಗೀತೆಯೊಂದಿಗೆ ಕಾರ್ಯಕ್ರಮ ಮುಕ್ತಾಯಗೊಂಡಿತು.
ಎಲಿಮಲೆ ಜಮಾಅತ್ ಅಧೀನದಲ್ಲಿರುವ ಜೀರ್ಮುಕ್ಕಿ ಮಸೀದಿ ವಠಾರದಲ್ಲಿ ತರ್ಭಿಯತುಲ್ ಇಸ್ಲಾಂ ಎಸೋಯಿಯೇಶನ್ ಇದರ ಆಶ್ರಯದಲ್ಲಿ ಸಂಭ್ರಮದ ಸ್ವತಂತ್ಯೋತ್ಸವವನ್ನು ಆಚರಿಸಲಾಗಿದೆ.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.