ಪುತ್ತೂರು(ವಿಶ್ವ ಕನ್ನಡಿಗ ನ್ಯೂಸ್): ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಬನ್ನೂರು ವಲಯದ ವತಿಯಿಂದ ಆಯುಷ್ಮಾನ್ ಕಾರ್ಡ್ ಅಭಿಯಾನ ಹಾಗೂ ಇತರ ಸರಕಾರಿ ಯೋಜನೆಗಳ ಅಭಿಯಾನ ಕಾರ್ಯಕ್ರಮವನ್ನು ಪುತ್ತೂರು ನಗರ ಸಭಾ ಸದಸ್ಯೆ ಕೆ ಫಾತಿಮತ್ ಝೂರಾ ಉದ್ಘಾಟಿಸಿದರು.
ಸಭಾಧ್ಯಕ್ಷತೆಯನ್ನು ಎಸ್.ಡಿ.ಪಿ.ಐ ಬನ್ನೂರು ವಲಯದ ಅಧ್ಯಕ್ಷ ಮೊಹಮ್ಮದ್ ಹುಸೇನ್ ವಹಿಸಿದರು. ಎಸ್.ಡಿ.ಪಿ.ಐ ನಗರ ಸಮಿತಿ ಅಧ್ಯಕ್ಷ ಬಶೀರ್ ಕೂರ್ನಡ್ಕ ಅಭಿಯಾನವನ್ನುದ್ದೇಶಿಸಿ ಮಾತನಾಡಿದರು. ಬದ್ರಿಯಾ ಜುಮಾ ಮಸ್ಜಿದ್ ಬನ್ನೂರು ಅಧ್ಯಕ್ಷ ಮೊಯ್ದೀನ್ ಹಾಜಿ, ಸಿಲ್ ಸಿಲಾ ವೆಲ್ಫೇರ್ ಅಸೋಸಿಯೇಷನ್ ಅಧ್ಯಕ್ಷ ಇಬ್ರಾಹಿಮ್ ಕೆ ಎಂ, ಪಿ.ಎಫ್.ಐ ಬನ್ನೂರು ವಲಯದ ಅಧ್ಯಕ್ಷ ಸಂಶುದ್ದೀನ್, ಎಸ್.ಡಿ.ಪಿ.ಐ ಪಡೀಲ್ ಬ್ರಾಂಚ್ ಅಧ್ಯಕ್ಷ ಶರೀಫ್ ಅಲ್ ಶಮ್ಮಾಸ್, ಎಸ್.ಡಿ.ಪಿ.ಐ ಸುಲ್ತಾನ್ ನಗರ ಬನ್ನೂರು ಬ್ರಾಂಚ್ ಅಧ್ಯಕ್ಷ ಕಾದರ್ ಅಕ್ಕರೆ,ಮುಸ್ಲಿಂ ಯೂತ್ ಫೆಡರೇಶನ್ ಬನ್ನೂರು ಅಧ್ಯಕ್ಷ ಅಝರ್ ಬನ್ನೂರು ಹಾಗೂ ಎಸ್.ಡಿ.ಪಿ.ಐ ಕಾರ್ಯಕರ್ತರು ಉಪಸ್ಥಿತರಿದ್ದರು.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.