ಬೆಳ್ತಂಗಡಿ (ವಿಶ್ವ ಕನ್ನಡಿಗ ನ್ಯೂಸ್ ): ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ದೇಗುಲದ ಆನೆ ಲಕ್ಷ್ಮೀಗೆ ಜನಿಸಿದ ಆನೆ ಮರಿಗೆ ನಾಮಕರಣ ಶಾಸ್ತ್ರ ನಡೆಸಲಾಯಿತು , ಆನೆ ಮರಿಗೆ ಶಿವಾನಿ ಎಂದು ಹೆಸರಿಡಲಾಗಿದೆ.ಕಳೆದ ಜುಲೈ1 ರಂದು ದೇಗುಲದ ಆನೆ ಲಕ್ಷ್ಮೀ ಹೆಣ್ಣು ಮರಿಗೆ ಜನ್ಮ ನೀಡಿತ್ತು. ಆ ಆನೆ ಮರಿಯ ನಾಮಕರಣ ಆ.31 ರಂದು ಅಂದರೆ ಇಂದು ತುಲಾ ಲಗ್ನ ಮುಹೂರ್ತದಲ್ಲಿ ನಡೆಯಿತು. ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆಯವರು ಆನೆ ಮರಿಗೆ ಶ್ರೀ ದೇವರ ಪ್ರಸಾದ ನೀಡಿ, ಗಂಟೆ ಕಟ್ಟುವ ಮೂಲಕ ವಿಧಿ ನೆರವೇರಿಸಿದರು.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.