ಬಂಟ್ವಾಳ, ಸೆ. 21, 2020 (ವಿಶ್ವಕನ್ನಡಿಗ ನ್ಯೂಸ್) : ತಾಲೂಕಿನ ಆಚಾರಿಪಲ್ಕೆ ಎಂಬಲ್ಲಿ 35 ಲಕ್ಷ ರೂಪಾಯಿ ವೆಚ್ಚದಲ್ಲಿ ಶಾಲಾ ಕೊಠಡಿ ನಿರ್ಮಾಣಕ್ಕೆ ಬಂಟ್ವಾಳ ಶಾಸಕ ಯು ರಾಜೇಶ್ ನಾಯ್ಕ್ ಸೋಮವಾರ ಶಿಲಾನ್ಯಾಸ ನೆರವೇರಿಸಿದರು. ಈ ಸಂದರ್ಭ ಕಿಯೋನಿಕ್ಸ್ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ, ಜಿ.ಪಂ. ಸದಸ್ಯ ತುಂಗಪ್ಪ ಬಂಗೇರ, ಬಂಟ್ವಾಳ ತಾ.ಪಂ. ಸದಸ್ಯ ಪ್ರಭಾಕರ್ ಪ್ರಭು, ಪ್ರಮುಖರಾದ ಸಂಜೀವ ಪೂಜಾರಿ, ಪ್ರಕಾಶ್ ಅಂಚನ್, ಕರುಣೇಂದ್ರ ಪೂಜಾರಿ, ಲಕ್ಮೀನಾರಾಯಣ ಗೌಡ, ಚಿದಾನಂದ ಕುಲಾಲ್, ಆನಂದ ಕೋಟ್ಯಾನ್, ರಮಾನಾಥ ರಾಯಿ, ನಂದರಾಮ ರೈ, ಯಶೋಧರ ಕರ್ಬೆಟ್ಟು, ವಸಂತ ಕುಮಾರ್ ಅಣ್ಣಳಿಕೆ, ಪುರುಷೋತ್ತಮ ಶೆಟ್ಟಿ, ದಿನೇಶ್ ಶೆಟ್ಟಿ ದಂಬೆದಾರ್, ಸಂತೋಷ ರಾಯಿಬೆಟ್ಟು, ವಿಕೇಶ್, ಮೋಹನದಾಸ್, ಕೇಶವ, ಸೀತರಾಮ ಪೂಜಾರಿ, ಡೊಂಬಯ ಅರಳ, ಗಣೇಶ್ ರೈ ಮಾಣಿ, ಅಭಿಯಂತರ ಅಜಿತ್ ಮೊದಲಾದವರು ಉಪಸ್ಥಿತರಿದ್ದರು.
ಪ್ರಧಾನ ವರದಿಗಾರರು, ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.