ಉಡುಪಿ,(ವಿಶ್ವ ಕನ್ನಡಿಗ ನ್ಯೂಸ್ ): ಹಾಡಹಗಲೇ ರಿಯಲ್ ಎಸ್ಟೇಟ್ ಉದ್ಯಮಿಯನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಜಿಲ್ಲೆಯ ಕಾಪು ತಾಲೂಕಿನ ಹಿರಿಯಡ್ಕ ಎಂಬಲ್ಲಿ ನಡೆದಿದೆ. ಕಿಶನ್ ಶೆಟ್ಟಿ (34) ಕೊಲೆಯಾದ ವ್ಯಕ್ತಿ ಎಂದು ಗುರುತಿಸಲಾಗಿದೆ .ಹಿರಿಯಡ್ಕದ ಹೃದಯ ಭಾಗದಲ್ಲಿ ಕಿಶನ್ ಶೆಟ್ಟಿಯನ್ನು ಮಚ್ಚಿನಿಂದ ಕೊಚ್ಚಿ ಭೀಕರವಾಗಿ ಕೊಲೆ ಮಾಡಿದ್ದಾರೆ. ಎರಡು ಕಾರುಗಳಿಂದ ಹಿಂಬಾಲಿಸುತ್ತಿದ್ದ ದೃಷ್ಕರ್ಮಿಗಳು ಕಾರಿನಲ್ಲಿ ಬಂದ ಕಿಶನ್ ಶೆಟ್ಟಿ ಯನ್ನು ಅಡ್ಡಗಟ್ಟಿ ಕಾರಿನಿಂದ ಹೊರಗೆಳೆದು ನಡುರಸ್ತೆಯಲ್ಲೇ ಕತ್ತು ಕತ್ತರಿಸಿ ಕೊಲೆ ಮಾಡಿದ್ದಾರೆ.ಹಿರಿಯಡ್ಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ .
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.