ಪುತ್ತೂರು(ವಿಶ್ವಕನ್ನಡಿಗ ನ್ಯೂಸ್): ಸರಕಾರಿ ಮೆಡಿಕಲ್ ಕಾಲೇಜಿಗೆ ಮೀಸಲಿಟ್ಟ ಬನ್ನೂರಿನ 40 ಎಕರೆ ಭೂಮಿಯನ್ನು ಸೀಫುಡ್ ಪಾರ್ಕ್ ನಿರ್ಮಾಣಕ್ಕೆ ನೀಡಬಾರದು ಎಂದು ಆಗ್ರಹಿಸಿ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಪುತ್ತೂರು ಜಿಲ್ಲಾ ಸಮಿತಿ ವತಿಯಿಂದ MLA ಆಫೀಸ್ ಮಾರ್ಚ್ ಪುತ್ತೂರಿನಲ್ಲಿ ನಡೆಯಿತು.
ಪ್ರತಿಭಟನೆಯನ್ನು ಉದ್ದೇಶಿಸಿ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ರಾಜ್ಯಾಧ್ಯಜ್ಷರಾದ ಫಯಾಝ್ ದೊಡ್ಡಮನೆ ಮಾತನಾಡಿ ಜಿಲ್ಲೆಯಲ್ಲಿ ಹಲವಾರು ಖಾಸಗೀ ಮೆಡಿಕಲ್ ಕಾಲೇಜುಗಳಿದ್ದು, ಆದರೆ ಒಂದೇ ಒಂದು ಸರಕಾರಿ ಮೆಡಿಕಲ್ ಕಾಲೇಜು ಇಲ್ಲದಿರುವುದು ಜಿಲ್ಲೆಯ ಜನಪ್ರತಿನಿಧಿಗಳ ವೈಫಲ್ಯವನ್ನು ಎತ್ತಿ ತೋರಿಸುತ್ತದೆ. ಇಷ್ಟು ವರ್ಷ ಜನತೆಯ ಮತವನ್ನು ಪಡೆದ ಜನಪ್ರತಿನಿಧಿಗಳು ಜಿಲ್ಲೆಗೆ ಬೆಂಕಿ ಹಚ್ಚುವ ಮತ್ತು ಅಭಿವೃದ್ಧಿಯ ಮಂತ್ರ ಜಪಿಸುತ್ತಿದ್ದಾರೆ. ಮೆಡಿಕಲ್ ಕಾಲೇಜಿಗೆ ಮೀಸಲಿಟ್ಟ ಭೂಮಿಯನ್ನು ಸೀಫುಡ್ ಪಾರ್ಕ್ ನೀಡಲು ಹೊರಟಿರುವುದು ಖಂಡನಾರ್ಹ. ಇದರ ವಿರುದ್ಧ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ನಡೆಯಲಿದೆ ಎಂದರು.
ನಂತರ ಮಾತನಾಡಿದ ಕ್ಯಾಂಪಸ್ ಫ್ರಂಟ್ ಜಿಲ್ಲಾ ಮುಖಂಡರಾದ ಸವಾದ್ ಕಲ್ಲರ್ಪೆ ರವರು ಶಾಸಕರು ಮೆಡಿಕಲ್ ಕಾಲೇಜಿಗೆ ಮೀಸಲಿಟ್ಟ ಜಾಗವನ್ನು ಸೀಫುಡ್ ಪಾರ್ಕ್ ಗೆ ನೀಡಲು ಹೊರಟಿರುವುದು ಅವರ ಶಿಕ್ಷಣದ ಮೇಲಿನ ಕಾಳಜಿಯನ್ನು ಎತ್ತಿ ತೋರಿಸುತ್ತದೆ. ಇದು ಸಾಂಕೇತಿಕ ಪ್ರತಿಭಟನೆ ಮಾತ್ರ. ಮುಂದಿನ ದಿನಗಳಲ್ಲಿ ಹೋರಾಟ ಮುಂದುವರೆಯಲಿದೆ ಎಂದರು.
ಈ ಸಂಧರ್ಭದಲ್ಲಿ ಕ್ಯಾಂಪಸ್ ಫ್ರಂಟ್ ಜಿಲ್ಲಾಧ್ಯಕ್ಷರಾದ ರಿಯಾಝ್ ಅಂಕತಡ್ಕ, ಕಾರ್ಯದರ್ಶಿ ಅನ್ಸಾರ್ ಬೆಳ್ಳಾರೆ, ಉಪಾಧ್ಯಕ್ಷ ಅಫ್ರೀದ್ ಕೂರ್ನಡ್ಕ, ಸಮಿತಿ ಸದಸ್ಯರಾದ ಫಾರೂಕ್, ಸಬೀರ್ ಉಪಸ್ಥಿತರಿದ್ದರು.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.