ಕೊಣಾಜೆ (ವಿಶ್ವ ಕನ್ನಡಿಗ ನ್ಯೂಸ್): ಮಂಗಳೂರು ವಿಶ್ವವಿದ್ಯಾನಿಲಯದ ಎಸ್.ವಿ.ಪಿ ಕನ್ನಡ ಅಧ್ಯಯನ ಸಂಸ್ಥೆ ಹಾಗೂ ಕವಿ ಪ್ರಕಾಶನ ಕವಲಕ್ಕಿ ಇದರ ಸಹಯೋಗದಲ್ಲಿ ಎಸ್.ವಿ.ಪಿ ಕನ್ನಡ ಅಧ್ಯಯನ ಸಂಸ್ಥೆಯ ಪ್ರಾಧ್ಯಾಪಕಿ ಪ್ರೊ.ಸಬಿಹಾ ಭೂಮಿಗೌಡ ಅವರ ಎರಡು ಕೃತಿಗಳ ಲೋಕಾರ್ಪಣೆ ಕಾರ್ಯಕ್ರಮ ಮಂಗಳಗಂಗೋತ್ರಿಯ ಯು.ಆರ್.ರಾವ್ ಸಭಾಂಗಣದಲ್ಲಿಂದು ನಡೆಯಿತು.
ಎಸ್.ವಿ.ಪಿ ಕನ್ನಡ ಅಧ್ಯಯನ ಸಂಸ್ಥೆಯ ಅಧ್ಯಕ್ಷ ಪ್ರೊ.ಅಭಯ್ ಕುಮರ್ ಕೆ. ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ವಿಜಯಪುರ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿವಿಯ ಕುಲಸಚಿವರಾದ ಪ್ರೊ. ಆರ್.ಸುನಂದಮ್ಮ ಅವರು ಪ್ರೊ.ಸಬಿಹಾ ಭೂಮಿಗೌಡ ಅವರ ‘ನಾರೀನೋಟ’ ಮತ್ತು ‘ಈವರೆಗಿನ ಕವಿತೆಗಳು’ ಎಂಬ ಎರಡು ಕೃತಿಗಳನ್ನು ಲೋಕಾರ್ಪಣೆ ಮಾಡಿದರು.
‘ನಾರೀನೋಟ’ ಕೃತಿಯ ಬಗ್ಗೆ ಕುಂದಾಪುರದ ಬಂಡಾರ್ ಕಾರ್ಸ್ ಕಾಲೇಜಿನ ಪ್ರಾಧ್ಯಾಪಕಿ ಡಾ.ರೇಖಾ ಬನ್ನಾಡಿ ಹಾಗೂ ‘ಈವರೆಗಿನ ಕವಿತೆಗಳು’ ಕೃತಿಯ ಬಗ್ಗೆ ತೆಂಕನಿಡಿಯೂರಿನ ಸ್ನಾತಕೋತ್ತರ ಕೇಂದ್ರದ ಕನ್ನಡ ವಿಭಾಗದ ಮುಖ್ಯಸ್ಥ ಡಾ.ಜಯಪ್ರಕಾಶ್ ಶೆಟ್ಟಿ ಅವರು ಮಾತನಾಡಿದರು.
ಕಾರ್ಯಕ್ರಮದಲ್ಲಿ ಪ್ರೊ.ಸಬಿಹಾ ಭೂಮಿಗೌಡ, ದು.ಸರಸ್ವತಿ, ಪ್ರೊ.ಸೋಮಣ್ಣ ಹೊಂಗಳ್ಳಿ ಹಾಗೂ ಪ್ರಾದ್ಯಾಪಕರು, ಎಸ್.ವಿ.ಪಿ ಕನ್ನಡ ಅಧ್ಯಯನ ಸಂಸ್ಥೆಯ ವಿದ್ಯಾರ್ಥಿಗಳು, ಸಂಶೋಧನಾ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.
ಎಸ್.ವಿ.ಪಿ ಕನ್ನಡ ಅಧ್ಯಯನ ಸಂಸ್ಥೆ ಸಹಾಯಕ ಪ್ರಾಧ್ಯಾಪಕ ಡಾ.ಧನಂಜಯ ಕುಂಬ್ಳೆ ಅವರು ಕಾರ್ಯಕ್ರಮವನ್ನು ನಿರೂಪಿಸಿದರು.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.