ಚಿಕ್ಕಬಳ್ಳಾಪುರ,(ವಿಶ್ವಕನ್ನಡಿಗ ನ್ಯೂಸ್): ಚಿಕ್ಕಬಳ್ಳಾಪುರ ಜಿಲ್ಲಾ ಕೇಂದ್ರದಲ್ಲಿ ಜನವರಿ 13 ರಂದು ನಡೆಯಲಿರುವ ಜನಸೇವಕ ಸಮಾವೇಶದ ಹಿನ್ನೆಲೆಯಲ್ಲಿ ನಗರದ ಸಿದೇಶ್ವರ ಸಭಾಂಗಣದಲ್ಲಿ ರಾಜ್ಯ ಮತ್ತು ಜಿಲ್ಲಾ ಬಿಜೆಪಿ ಮುಖಂಡರು ಪೂರ್ವಭಾವಿ ಸಭೆಯನ್ನು ನಡೆಸಿದರು.
ಸಭೆಯಲ್ಲಿ ರಾಜ್ಯ ಕಾರ್ಯದರ್ಶಿಗಳು ಹಾಗೂ ವಿಭಾಗ ಪ್ರಭಾರಿ ಕೇಶವ ಪ್ರಸಾದ್, ವಿಭಾಗ ಸಂಘಟನಾ ಪ್ರಧಾನ ಕಾರ್ಯದರ್ಶಿ ಕಾಂತರಾಜ್ ಮತ್ತಿತರರು ಮಾತನಾಡಿ ಜಿಲ್ಲೆಯಲ್ಲಿ ನಡೆಯುತ್ತಿರುವ ಸಮಾವೇಶವನ್ನು ಯಶಸ್ವಿಗೊಳಿಸಲು ಎಲ್ಲರು ಸಹಕರಿಸಬೇಕೆಂದು ಕರೆ ನೀಡಿ ಜಿಲ್ಲಾ ಕೇಂದ್ರದಲ್ಲಿ ಒಂದು ರೀತಿಯ ಹಬ್ಬದ ವಾತಾವರಣವನ್ನು ನಿರ್ಮಿಸಬೇಕೆಂದರು.
ಸಮಾವೇಶದಲ್ಲಿ ಉಪಮುಖ್ಯಮಂತ್ರಿ ಡಾ.ಅಶ್ವತ್ಥನಾರಾಯಣ,ಸಚಿವ ಶ್ರೀರಾಮುಲು,ಸಂಸದೆ ಶೋಭಾ ಕರಂದ್ಲಾಜೆ,ಗೃಹ ಸಚಿವ ಬಸವರಾಜ್ ಬೊಮ್ಮಾಯಿ,ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಭಾಗವಹಿಸಲಿದ್ದು ಸಮಾವೇಶವನ್ನು ಯಶಸ್ವಿಗೊಳಿಸಲು ಎಲ್ಲರು ಕೈಜೋಡಿಸಬೇಕೆಂದ ಅವರು ಇತ್ತೀಚಿಗೆ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಗೆಲುವು ಸಾಧಿಸಿದ ಮತ್ತು ಪರಾಭವಗೊಂಡಿರುವ ಅಭ್ಯರ್ಥಿಗಳಿಗೆ ವಿಶೇಷವಾಗಿ ಗೌರವಿಸಲಾಗುವುದೆಂದರು.
ಸಭೆಯಲ್ಲಿ ಮಾಜಿ ಶಾಸಕಿ ಎನ್.ಜ್ಯೋತಿರೆಡ್ಡಿ,ಎಂ.ರಾಜಣ್ಣ, ರಾಜ್ಯ ಕಾರ್ಯದರ್ಶಿಗಳು ಹಾಗೂ ಜನಸೇವಕ ಸಮಾವೇಶದ ಸಂಚಾಲಕರಾದ ನವೀನ್, ರಾಜ್ಯ ಮಹಿಳಾ ಮೋರ್ಚಾ ಅಧ್ಯಕ್ಷರು ಹಾಗೂ ಜನಸೇವಕ ಸಮಾವೇಶದ ವ್ಯವಸ್ಥಾಪಕಿ ಗೀತಾವಿವೇಕನಂದ,ಜಿಲ್ಲಾ ಬಿಜೆಪಿ ಅಧ್ಯಕ್ಷ ರಾಮಲಿಂಗಪ್ಪ, ಪಕ್ಷದ ಜಿಲ್ಲಾ ಉಸ್ತುವಾರಿ ಕೃಷ್ಣರೆಡ್ಡಿ,ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮುರಳೀಧರ್,ಆವಲಗುರ್ಕಿ ಶ್ರೀನಿವಾಸ್ರೆಡ್ಡಿ, ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಮರಳ ಕುಂಟೆ ಕೃಷ್ಣ ಮೂರ್ತಿ,ಜಿಲ್ಲಾ ವಕ್ತಾರ ರಮೇಶ್ ಬಾಯರಿ,ಜಿಲ್ಲಾ ಮಾಧ್ಯಮ ಪ್ರಮುಖ ಮಧುಚಂದ್ರ ಹಾಗೂ ಜಿಲ್ಲಾ ಪದಾಧಿಕಾರಿಗಳು, ಜಿಲ್ಲಾ ಮೋರ್ಚಾ ಅಧ್ಯಕ್ಷರು ಮತ್ತು ಪ್ರಧಾನ ಕಾರ್ಯದರ್ಶಿಗಳು,ಮಂಡಲದ ಅಧ್ಯಕ್ಷರು ಮತ್ತು ಪ್ರಧಾನ ಕಾರ್ಯದರ್ಶಿಗಳು,ಮಂಡಲ ಮೋರ್ಚಾ ಅಧ್ಯಕ್ಷರು ಮತ್ತು ಪ್ರಧಾನ ಕಾರ್ಯದರ್ಶಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.
ವರದಿ ಅನ್ಸಾರಿ ಚಿಕ್ಕಬಳ್ಳಾಪುರ
ವರದಿಗಾರರು, ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.