ಶಿಡ್ಲಘಟ್ಟ,(ವಿಶ್ವಕನ್ನಡಿಗ ನ್ಯೂಸ್): ರಾಜ್ಯ ಬೆಸ್ಕಾಂ ಇಲಾಖೆಯ ತಾಂತ್ರಿಕ ನಿರ್ದೇಶಕ ರಾಮೇಗೌಡ ಅವರನ್ನು ಬೆಸ್ಕಾಂ ಇಲಾಖೆಯ ಶಿಡ್ಲಘಟ್ಟ ಗ್ರಾಮಾಂತರ ವಿಭಾಗದ ಎಇಇ ಪ್ರಭು ಬಸವಯ್ಯ ನೇತೃತ್ವದಲ್ಲಿ ಅಧಿಕಾರಿಗಳ ತಂಡ ಭೇಟಿ ನೀಡಿ ಸಮಾಲೋಚನೆ ನಡೆಸಿದರು.
ಬೆಸ್ಕಾಂ ಇಲಾಖೆಯ ಮೂಲಕ ಗ್ರಾಹಕರಿಗೆ ಉತ್ತಮ ರೀತಿಯಲ್ಲಿ ಸೇವೆ ಸಲ್ಲಿಸುವ ಮೂಲಕ ಇಲಾಖೆಗೆ ಗೌರವ ತರುವ ಕೆಲಸವನ್ನು ಅಧಿಕಾರಿಗಳು ಮತ್ತು ಸಿಬ್ಬಂದಿ ಮಾಡಬೇಕೆಂದು ಸಲಹೆ ನೀಡಿದ ರಾಜ್ಯ ನಿರ್ದೇಶಕರು ರೈತರು ಮತ್ತು ಗ್ರಾಹಕರೊಂದಿಗೆ ಉತ್ತಮ ಬಾಂಧವ್ಯವನ್ನು ಹೊಂದಿ ಸಾರ್ವಜನಿಕರ ಸಮಸ್ಯಗಳಿಗೆ ತಕ್ಷಣ ಸ್ಪಂದಿಸಿ ಇಲಾಖೆಯಲ್ಲಿರುವ ಸೌಲಭ್ಯಗಳ ಕುರಿತು ಅರಿವು ಮೂಡಿಸಿ ಸರ್ಕಾರಗಳಿಂದ ಬರುವ ಆದೇಶಗಳನ್ವಯ ಕರ್ತವ್ಯನಿರ್ವಹಿಸಬೇಕೆಂದರು.
ಈ ಸಂದರ್ಭದಲ್ಲಿ ದೇವನಹಳ್ಳಿ ಬೆಸ್ಕಾಂ ಜೆಇ ಮಹೇಶ್,ಸೂಲಿಬೆಲೆ ಎಇ ಅನೀಲ್ ಕುಮಾರ್,ದೇವನಹಳ್ಳಿ ಕೆಪಿಟಿಸಿಎಲ್ ನೌಕರರ ಸಂಘದ ಕಾರ್ಯದರ್ಶಿ ಅರುಣ್,ದೊಡ್ಡಬಳ್ಳಾಪುರ ಎಇ ಲಿಂಗೇಗೌಡ ಮತ್ತಿತರರು ಉಪಸ್ಥಿತರಿದ್ದರು.
ವರದಿ: ತೆ.ಮೀಂ.ಅನ್ಸಾರಿ ಶಿಡ್ಲಘಟ್ಟ
ವರದಿಗಾರರು, ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.