ಬಂಟ್ವಾಳ : ಇಲ್ಲಿನ ತಾ ಪಂ ಮಾಜಿ ಉಪಾಧ್ಯಕ್ಷ, ಬಂಟ್ವಾಳ ಎಪಿಎಂಸಿ ಮಾಜಿ ನಿರ್ದೇಶಕ ಹಾಗೂ ಜಿಲ್ಲಾ ಕಾಂಗ್ರೆಸ್ ಸಮಿತಿ (ಡಿಸಿಸಿ) ಹಾಲಿ ಕಾರ್ಯದರ್ಶಿ ಉಮ್ಮರ್ ಫಜೀರ್ (60) ಹಠಾತ್ ಹೃದಯಾಘಾತಕ್ಕೊಳಗಾಗಿ ಶುಕ್ರವಾರ ಮುಂಜಾನೆ ನಿಧನರಾದರು.
ಶುಕ್ರವಾರ ಮುಂಜಾನೆ ವೇಳೆಗೆ ಹೃದಯ ಬೇನೆ ಕಾಣಿಸಿಕೊಂಡ ಹಿನ್ನಲೆಯಲ್ಲಿ ತಕ್ಷಣ ಅವರನ್ನು ಕಣಚೂರು ಆಸ್ಪತ್ರೆಗೆ ಸಾಗಿಸಲಾಯಿತಾದರೂ ಚಿಕಿತ್ಸೆಗೆ ಸ್ಪಂದಿಸದ ಅವರು ಮೃತಪಟ್ಟಿದ್ದಾರೆ. ಮೃತರು ಪತ್ನಿ, ಓರ್ವ ಪುತ್ರ, ಪುತ್ರಿ ಹಾಗೂ ಅಪಾರ ಬಂಧು-ಬಳಗವನ್ನು ಅಗಲಿದ್ದಾರೆ.
ಪ್ರಧಾನ ವರದಿಗಾರರು, ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.