ಬೆಳ್ಳಾರೆ(ವಿಶ್ವಕನ್ನಡಿಗ ನ್ಯೂಸ್): ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಬೆಳ್ಳಾರೆ ವಲಯ ಸಮಿತಿ ವತಿಯಿಂದ 72 ನೇ ಗಣರಾಜ್ಯೋತ್ಸವ ದ ಅಂಗವಾಗಿ ಧ್ವಜಾರೋಹಣ ಹಾಗೂ ರೈತ ಐಕ್ಯತಾ ಸಂಗಮವು ಜರುಗಿತು. ಎಸ್.ಡಿ.ಪಿ.ಐ ಬೆಳ್ಳಾರೆ ವಲಯ ಅಧ್ಯಕ್ಷ ಸಿದ್ದೀಕ್ ಬೆಳ್ಳಾರೆ ಧ್ವಜಾರೋಹಣ ನೆರವೇರಿಸಿದರು.
ಮುಖಂಡ ಶಾಫಿ ಬೆಳ್ಳಾರೆ ಸಂದೇಶ ಭಾಷಣ ಮಾಡಿದರು. ನಂತರ ರೈತರ ಹೋರಾಟಕ್ಕೆ ಬೆಂಬಲ ವ್ಯಕ್ತಪಡಿಸಿ ಮಾತನಾಡಿದ ಬೆಳ್ಳಾರೆ ಗ್ರಾಮ ಪಂಚಾಯತ್ ಸದಸ್ಯ ಇಕ್ಬಾಲ್ ಬೆಳ್ಳಾರೆ ರಾಷ್ಟ್ರದಾದ್ಯಂತ ರೈತರು ಸರ್ಕಾರದ ಕರಾಳ ಕೃಷಿ ಕಾಯ್ದೆಗಳ ವಿರುದ್ಧ ಬೀದಿಯಲ್ಲಿ ಹೋರಾಟ ನಡೆಸುತ್ತಿದ್ದಾರೆ ಆದರೇ ಸರ್ಕಾರ ಇವರ ಬೇಡಿಕೆಗಳನ್ನು ಈಡೇರಿಸದೇ ಹೋರಾಟವನ್ನು ಹತ್ತಿಕ್ಕಲು ಮುಂದಾಗಿದೆ ಇದು ನಮ್ಮ ದೇಶದ ಕೃಷಿ ಕ್ಷೇತ್ರವನ್ನು ಬಂಡವಾಳಶಾಹಿಗಳಿಗೆ ಮಾರಾಟ ಮಾಡುವ ತಂತ್ರ ವಾಗಿದೆ. ಆದುದರಿಂದ ರೈತರ ನ್ಯಾಯಕ್ಕಾಗಿರುವ ಹೋರಾಟಗಳಿಗೆ ಪಕ್ಷದ ಬೆಂಬಲವಿದೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಎಸ್.ಡಿ.ಪಿ.ಐ ಸುಳ್ಯ ವಿಧಾನಸಭಾ ಸದಸ್ಯರು ಗಳಾದ ಹಾಜಿ.ಕೆ.ಮಮ್ಮಾಲಿ, ಬಿ.ಎ.ಬಶೀರ್, ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಬೆಳ್ಳಾರೆ ವಲಯ ಅಧ್ಯಕ್ಷ ಫಾರೂಕ್.ಎನ್, ಮುಂತಾದವರು ಉಪಸ್ಥಿತರಿದ್ದರು. ಸಭೆಗೆ ಬಶೀರ್ ಸ್ವಾಗತಿಸಿ ಎಸ್.ಡಿ.ಪಿ.ಐ ಬೆಳ್ಳಾರೆ ವಲಯ ಕಾರ್ಯದರ್ಶಿ ಶಫೀಮ್ ವಂದಿಸಿದರು.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.