ಮಂಗಳೂರು (ವಿಶ್ವಕನ್ನಡಿಗ ನ್ಯೂಸ್): ಕೇಂದ್ರ ಸರ್ಕಾರದ ಜನ ವಿರೋಧಿ ನೀತಿಯನ್ನು ಮತ್ತು ಪ್ರಸಕ್ತ ನಿರಂತರ ಏರುತ್ತಿರುವ ಪೆಟ್ರೋಲ್, ಡೀಸೆಲ್, ಅಡುಗೆ ಅನಿಲ ಹಾಗೂ ದಿನಬಳಕೆ ವಸ್ತುಗಳ ಬೆಲೆ ಏರಿಕೆಯ ವಿರುದ್ಧ ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ರಾಜ್ಯಾದ್ಯಂತ ಹಮ್ಮಿಕೊಂಡಿರುವ ಪ್ರತಿಭಟನೆಯ ಭಾಗವಾಗಿ ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ದ.ಕ. ಜಿಲ್ಲಾ ಘಟಕವು ಫೆಬ್ರವರಿ 5 ರ ಶುಕ್ರವಾರ ಸಂಜೆ 4:00 ಕ್ಕೆ ಮಂಗಳೂರು ಹಂಪನಕಟ್ಟೆಯ ಮಿನಿ ವಿಧಾನಸೌಧ ಎದುರಿನಲ್ಲಿ ಪ್ರತಿಭಟನಾ ಸಭೆಯನ್ನು ಆಯೋಜಿಸಿರುವುದಾಗಿ ಪಕ್ಷದ ಜಿಲ್ಲಾಧ್ಯಕ್ಷರಾದ ಅಡ್ವೋಕೇಟ್ ಸರ್ಫ್ ರಾಝ್ ಮತ್ತು ಜಿಲ್ಲಾ ಕಾರ್ಯದರ್ಶಿ ಎಸ್. ಎಮ್. ಮುತ್ತಲಿಬ್ ರವರು ತಮ್ಮ ಜಂಟಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುವರು.
ಕೇಂದ್ರ ಸರಕಾರ ಜನ ಸಾಮಾನ್ಯರ ಬದುಕಿನಲ್ಲಿ ಚೆಲ್ಲಾಟವಾಡುತ್ತಿದೆ. ಹಾಗೂ ಇದರ ಬಗ್ಗೆ ವಿರೋಧ ಪಕ್ಷಗಳು ಮೌನ ಪ್ರೇಕ್ಷಕವಾಗಿರುವ ಕಾರಣ, ಕೇಂದ್ರ ಸರಕಾರದ ಈ ಜನ ವಿರೋಧಿ ನೀತಿಯನ್ನು ವಿರೋಧಿಸಿ ರಂಗಕ್ಕಿಳಿಯುವುದು ನಮಗೆ ಅನಿವಾರ್ಯವಾಗಿರುವುದರಿಂದಾಗಿ ಇದನ್ನು ವಿರೋಧಿಸಿ ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ರಾಜ್ಯಾದ್ಯಂತ ಪ್ರತಿಭಟನೆಯನ್ನು ಹಮ್ಮಿಕೊಂಡಿದ್ದು, ಅದರಂತೆ ಫೆಬ್ರವರಿ 5 ಶುಕ್ರವಾರ ಸಂಜೆ 4: 00 ಗಂಟೆಗೆ ಮಂಗಳೂರಿನ ಮಿನಿ ವಿಧಾನ ಸೌಧದ ಮುಂಭಾಗದಲ್ಲಿ ಪ್ರತಿಭಟನೆ ನಡೆಯಲಿದೆ. ಆದ್ದರಿಂದ ತಾವೆಲ್ಲರೂ ಬೃಹತ್ ಸಂಖ್ಯೆಯಲ್ಲಿ ಇದರಲ್ಲಿ ಭಾಗವಹಿಸಿ ಈ ಪ್ರತಿಭಟನೆಯನ್ನು ಯಶಸ್ವಿಗೊಳಿಸಬೇಕೆಂದು ಅವರು ಈ ಸಂಧರ್ಭದಲ್ಲಿ, ಸಾರ್ವಜನಿಕರನ್ನು ಕೋರಿಕೊಂಡಿರುವರು.
ಸಂಪಾದಕರು, ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.