ಶಿಡ್ಲಘಟ್ಟ,(ವಿಶ್ವಕನ್ನಡಿಗ ನ್ಯೂಸ್) ತೀವ್ರ ಕುತೂಹಲ ಕೆರಳಿಸಿದ ತಾಲೂಕಿನ ಜಂಗಮಕೋಟೆ ಗ್ರಾಪಂ ಅಧ್ಯಕ್ಷರಾಗಿ ಕಾಂಗ್ರೇಸ್ನ ಜೆ.ಆರ್.ಶ್ರೀನಿವಾಸ್ ಹಾಗೂ ಉಪಾಧ್ಯಕ್ಷರಾಗಿ ಎನ್.ಸುಮಿತ್ರ ಆಯ್ಕೆಯಾಗಿದ್ದಾರೆ.
ಅಧ್ಯಕ್ಷ ಸ್ಥಾನ ಬಿಸಿಎಂ(ಬಿ) ವರ್ಗಕ್ಕೆ ಮೀಸಲಾದ ಹಿನ್ನೆಲೆಯಲ್ಲಿ ಜೆ.ಆರ್.ಶ್ರೀನಿವಾಸ್ ಹಾಗೂ ಜೆಡಿಎಸ್ ಪಕ್ಷದಿಂದ ಪ್ರೇಮ ನಾಮಪತ್ರ ಸಲ್ಲಿಸಿದರು ಉಪಾಧ್ಯಕ್ಷ ಸ್ಥಾನ ಪರಿಶಿಷ್ಠ ಪಂಗಡಕ್ಕೆ ಮೀಸಲಾಗಿದ್ದರಿಂದ ಕಾಂಗ್ರೆಸ್ ಪಕ್ಷದಿಂದ ಸುಮಿತ್ರ ಹಾಗೂ ಜೆಡಿಎಸ್ ಪಕ್ಷದಿಂದ ನಾರಾಯಣಮ್ಮ ನಾಮಪತ್ರ ಸಲ್ಲಿಸಿದರು.
ಗ್ರಾಮ ಪಂಚಾಯಿತಿಯಲ್ಲಿ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಜೆ.ಆರ್.ಶ್ರೀನಿವಾಸ್ ಅವರು 9 ಮತಗಳು ಪಡೆದುಕೊಂಡು ಗೆಲುವು ಸಾಧಿಸಿದರು ಜೆಡಿಎಸ್ ಪಕ್ಷದ ಅಭ್ಯರ್ಥಿ ಪ್ರೇಮ 8 ಮತಗಳು ಪಡೆದುಕೊಂಡು ಪರಾಭವಗೊಂಡರು ಅದೇ ರೀತಿಯಲ್ಲಿ ಕಾಂಗ್ರೆಸ್ ಪಕ್ಷದ ಸುಮಿತ್ರ 9 ಮತಗಳು ಪಡೆದುಕೊಂಡು ಉಪಾಧ್ಯಕ್ಷರಾಗಿ ಆಯ್ಕೆಯಾದರು ಜೆಡಿಎಸ್ ಪಕ್ಷದ ನಾರಾಯಣಮ್ಮ 8 ಮತಗಳು ಪಡೆದುಕೊಂಡು ಪರಾಭವಗೊಂಡರು.
ಗ್ರಾಮ ಪಂಚಾಯಿತಿ ಅಧ್ಯಕ್ಷ ಉಪಾಧ್ಯಕ್ಷರ ಫಲಿತಾಂಶ ಹೊರಬೀಳುತ್ತಿದ್ದಂತೆ ಜಂಗಮಕೋಟೆ ಗ್ರಾಮದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪಟಾಕಿ ಸಿಡಿಸಿ ಸಿಹಿ ಹಂಚುವ ಮೂಲಕ ಸಂಭ್ರಮ ವ್ಯಕ್ತಪಡಿಸಿ ಗ್ರಾಮದಲ್ಲಿ ವಿಜಯೋತ್ಸವದ ಮೆರವಣಿಗೆ ನಡೆಸಿದರು.
ಚುನಾವಣಾಧಿಕಾರಿಯಾಗಿ ತಹಶೀಲ್ದಾರ್ ರಾಜೀವ್ ಕಾರ್ಯನಿರ್ವಹಿಸಿದರು
ವರದಿ: ತೆ.ಮೀಂ.ಪಾಷ ಶಿಡ್ಲಘಟ್ಟ ಚಿತ್ರಗಳು: ಸುರೇಶ್
ವರದಿಗಾರರು, ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.