ಬೆಳ್ಳಾರೆ(ವಿಶ್ವಕನ್ನಡಿಗ ನ್ಯೂಸ್): ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ದ ಸಂಸ್ಥಾಪನಾ ದಿನಾಚರಣೆ ಯ ಅಂಗವಾಗಿ ಬೆಳ್ಳಾರೆ ವಲಯ ಸಮಿತಿ ವತಿಯಿಂದ ಧ್ವಜಾರೋಹಣ ಕಾರ್ಯಕ್ರಮ ಇಂದು ಜರುಗಿತು. ಪಾಪ್ಯುಲರ್ ಫ್ರಂಟ್ ಬೆಳ್ಳಾರೆ ವಲಯ ಅಧ್ಯಕ್ಷ ಫಾರೂಕ್. ಎನ್ ಧ್ವಜಾರೋಹಣ ನೆರವೇರಿಸಿದರು.
ಎಸ್.ಡಿ.ಪಿ.ಐ ರಾಜ್ಯ ಸಮಿತಿ ಸದಸ್ಯರೂ ಬೆಳ್ಳಾರೆ ಗ್ರಾಮ ಪಂಚಾಯಿತಿ ಸದಸ್ಯರೂ ಆದ ಇಕ್ಬಾಲ್ ಬೆಳ್ಳಾರೆ ಸಂದೇಶ ಭಾಷಣ ಮಾಡಿದರು. ನಂತರ ರೈತ ಚಳುವಳಿ ಯಲ್ಲಿ ವೀರಮರಣ ಹೊಂದಿದ ರೈತರಿಗೆ ಮೌನ ಪ್ರಾರ್ಥನೆ ಸಲ್ಲಿಸಲಾಯಿತು.
ಕಾರ್ಯಕ್ರಮದಲ್ಲಿ ಪಾಪ್ಯುಲರ್ ಫ್ರಂಟ್ ರಾಜ್ಯ ನಾಯಕ ಜನಾಬ್ ಶಾಫಿ ಬೆಳ್ಳಾರೆ, ಎಸ್.ಡಿ.ಪಿ.ಐ ನಾಯಕರಾದ ಮಮ್ಮಾಲಿ ಹಾಜಿ, ಬಿ.ಎ.ಬಶೀರ್, ಯು.ಎಚ್.ಝೈನುದ್ದೀನ್, ಅಬ್ದುಲ್ ರಹಿಮಾನ್ ತಂಬಿನಮಕ್ಕಿ, ಎಸ್.ಡಿ.ಪಿ.ಐ ವಲಯ ಅಧ್ಯಕ್ಷ ಸಿದ್ದೀಕ್ ಬೆಳ್ಳಾರೆ, ಪಾಪ್ಯುಲರ್ ಫ್ರಂಟ್ ಸುಳ್ಯ ಡಿವಿಷನ್ ಕಾರ್ಯದರ್ಶಿ ಶಾಹೀದ್.ಎಂ, ವಲಯ ಕಾರ್ಯದರ್ಶಿ ಶಾಫಿ.ಟಿ ಮುಂತಾದವರು ಉಪಸ್ಥಿತರಿದ್ದರು. ಕಾರ್ಯಕ್ರಮಕ್ಕೆ ನಿಜಾಮುದ್ದೀನ್ ಸ್ವಾಗತಿಸಿ ಬಶೀರ್ ವಂದಿಸಿದರು.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.