ಬಂಟ್ವಾಳ (ವಿಶ್ವಕನ್ನಡಿಗ ನ್ಯೂಸ್) : ತಮ್ಮ ಪರಂಪರೆಯನ್ನು ಉಳಿಸಿಕೊಂಡು ಸಮಾಜ ಸೇವೆಯ ಮನೋಭಾವದೊಂದಿಗೆ ದುಡಿಯುತ್ತಿರುವ ಸವಿತಾ ಸಮಾಜ ಶ್ಲಾಘನೆಗೆ ಅರ್ಹ ಅಲ್ಲದೇ ಸ್ವಾಭಿಮಾನಿ ರಾಷ್ಟ್ರ ನಿರ್ಮಾಣಕ್ಕೆ ಹೋರಾಡಿದ ಶಿವಾಜಿ ಮಹಾರಾಜರ ಶೌರ್ಯ, ಸಾಹಸ, ದೇಶಭಕ್ತಿ ನಮಗೆಲ್ಲರಿಗೂ ಆದರ್ಶ ಎಂದು ಬಂಟ್ವಾಳ ತಾಲೂಕು ಕಛೇರಿ ಕೇಂದ್ರ ಸ್ಥಾನೀಯ ಶಿರಸ್ತೇದಾರ್ ಅಣ್ಣು ನಾಯ್ಕ್ ಅಭಿಪ್ರಾಯಪಟ್ಟರು. ಬಿ.ಸಿ.ರೋಡಿನ ಮಿನಿ ವಿಧಾನಸೌಧ ಸಭಾಂಗಣದಲ್ಲಿ ಶುಕ್ರವಾರ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ನಡೆದ ಶ್ರೀ ಸವಿತಾ ಮಹರ್ಷಿ ಹಾಗೂ ಶ್ರೀ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ತಾಲೂಕು ಸವಿತಾ ಸಮಾಜದ ಅಧ್ಯಕ್ಷ ಸುರೇಶ್ ನಂದೊಟ್ಟು ಮಾತನಾಡಿ, ದೇವಾನುದೇವತೆಗಳ ಆಯುಷ್ಕರ್ಮವನ್ನು ನೆರವೇರಿಸುತ್ತಿದ್ದ ಸವಿತಾ ಮಹರ್ಷಿಗಳ ಜನ್ಮ ದಿನವನ್ನು ನಾವು ಸವಿತಾ ಜಯಂತಿಯಾಗಿ ಆಚರಿಸುತ್ತಿದ್ದೇವೆ. ಆಯುಷ್ಕರ್ಮ ಮಾತ್ರವಲ್ಲ ಆಯುರ್ವೇದವನ್ನು ಒಳಗೊಂಡು ಸಮಾಜದ ಒಳಿತಿಗಾಗಿ ಈ ಸಮಾಜ ಶ್ರಮಿಸುತ್ತಿದೆ ಎಂದರು.
ಈ ಸಂದರ್ಭ ಉದ್ಯಮಿ, ಬಿ.ಸಿ.ರೋಡು ಸವಿತಾ ಸೌಹಾರ್ದ ಸಹಕಾರಿ ಸಂಘದ ಅಧ್ಯಕ್ಷ ವಿಶ್ವನಾಥ್ ಬಂಟ್ವಾಳ, ಉಪತಹಸೀಲ್ದಾರ್ ರಾಜೇಶ್ ನಾಯ್ಕ್, ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯ ವಿಷಯ ನಿರ್ವಾಹಕ ವಿಶುಕುಮಾರ್, ತಾಲೂಕು ಕಚೇರಿ ಸಿಬ್ಬಂದಿಗಳು, ಗ್ರಾಮ ಲೆಕ್ಕಾಧಿಕಾರಿಗಳು, ಗ್ರಾಮ ಸಹಾಯಕರು ಭಾಗವಹಿಸಿದ್ದರು. ಜನಾರ್ದನ ಬಂಟ್ವಾಳ್ ಸ್ವಾಗತಿಸಿ, ವಂದಿಸಿದರು.
ಪ್ರಧಾನ ವರದಿಗಾರರು, ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.