ಉಡುಪಿ ,(ವಿಶ್ವ ಕನ್ನಡಿಗ ನ್ಯೂಸ್ ): ಸಾಸ್ತಾನ ಟೋಲ್ ಹೆದ್ದಾರಿ ಜಾಗ್ರತಿ ಸಮಿತಿ ವತಿಯಿಂದ ಸ್ಥಳೀಯರಿಗೆ ಟೋಲ್ ವಿನಾಯಿತಿ ನೀಡಬೇಕೆಂದು ಉಡುಪಿ ಜಿಲ್ಲಾ ಪಂಚಾಯತ್ ಡಾll ವಿ.ಎಸ್ ಆಚಾರ್ಯ ಸಭಾಂಗಣದಲ್ಲಿ ಇಂದು ಸಭೆ ನಡೆಯಿತು.ಶಾಸಕ ಶ್ರೀ. ಕೆ ರಘುಪತಿ ಭಟ್ ರವರು ಭಾಗವಹಿಸಿ ಮಾತನಾಡಿ ಸುಂಕ ವಸೂಲಾತಿ (Toll Gate) ಕೇಂದ್ರಗಳಲ್ಲಿ 5 ಕಿ.ಮೀ ವ್ಯಾಪ್ತಿ ಒಳಗಿನ ಸ್ಥಳೀಯರಿಗೆ ಸುಂಕ ವಸೂಲಾತಿಯಿಂದ ವಿನಾಯಿತಿ ನೀಡಬೇಕು. ಅಲ್ಲದೆ ಸುಂಕ ವಸೂಲಾತಿ ಕೇಂದ್ರದಲ್ಲಿ ಸ್ಥಳೀಯರನ್ನು ಸುಂಕ ವಸೂಲಿದಾರರನ್ನಾಗಿ ನೇಮಿಸಬೇಕು ಎಂದು ಸಲಹೆ ನೀಡಿದರು.ಉಡುಪಿ ಚಿಕ್ಕಮಗಳೂರು ಸಂಸದರಾದ ಶೋಭಾ ಕರಂದ್ಲಾಜೆ ಅಧ್ಯಕ್ಷತೆ ವಹಿಸಿದ್ದರು. ಕಾಪು ಶಾಸಕರಾದ ಲಾಲಾಜಿ ಆರ್ ಮೆಂಡನ್, ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ದಿನಕರ್ ಬಾಬು, ಜಿಲ್ಲಾಧಿಕಾರಿಗಳಾದ ಜಿ ಜಗದೀಶ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ನವೀನ್ ಭಟ್ ವೈ, ಪೋಲಿಸ್ ವರಿಷ್ಠಾಧಿಕಾರಿಗಳಾದ ಎನ್ ವಿಷ್ಣುವರ್ಧನ್, ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಕುಮಾರ್ ಚಂದ್ರ ಮತ್ತು ರಾಷ್ಟ್ರೀಯ ಹೆದ್ದಾರಿ ಜಾಗೃತ ಸಮಿತಿಯ ಪದಾಧಿಕಾರಿಗಳು ಉಪಸ್ಥಿತರಿದ್ದರು.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.